1 ನೇ ತರಗತಿ ವಿದ್ಯಾರ್ಥಿಗೆ ಹೊಸ ರೂಲ್ಸ್

geetha
ಬುಧವಾರ, 6 ಮಾರ್ಚ್ 2024 (17:21 IST)
ಬೆಂಗಳೂರು-ಆರ್ ಟಿ ಇ ಕಾಯಿದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012 ರಂತ 2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ 1ನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿ ಪಡಿಸಿ ಉಲ್ಲೇಖ-2 ರನ್ವಯ ತಿದ್ದುಪಡಿ ಆದೇಶ ಹೊರಡಿಸಿರುತ್ತದೆ. ಅದರಂತೆ ಕ್ರಮವಹಿಸಲು ಇಲಾಖೆಯ ಎಲ್ಲಾ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಶಾಲಾ ಮುಖ್ಯಸ್ಥರಿಗೆ ತಿಳಿಸಲಾಗಿದೆ.
 
ಕರ್ನಾಟಕ ಸರ್ಕಾರವು ಮೊದಲ ವಿದ್ಯಾರ್ಥಿಗೆ ಶಾಲಾ ಪ್ರವೇಶದ ವಯೋಮಿತಿಯನ್ನು ಜೂನ್ 1 ರಿಂದ 6 ವರ್ಷಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿದೆ.ಆರ್‌ಟಿಇ ಕಾಯಿದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರ ಅಡಿಯಲ್ಲಿ, ಪ್ರಥಮ ದರ್ಜೆಗೆ ಪ್ರವೇಶಕ್ಕೆ ಕನಿಷ್ಠ ವಯಸ್ಸನ್ನು ನಿಗದಿಪಡಿಸಲಾಗಿದೆ.
 
ಹಿಂದಿನ ನಿಯಮಗಳ ಪ್ರಕಾರ ಒಂದನೇ ತರಗತಿಗೆ ಸೇರ್ಪಡೆಗೆ ಐದು ವರ್ಷ ಐದು ತಿಂಗಳಾದರೆ ಸಾಕಿತ್ತು. ಇದರ ಅನ್ವಯ ಹೆಚ್ಚಿನ ಮಕ್ಕಳನ್ನು ಮೂರುವರೆ ವರ್ಷಕ್ಕೆ ಎಲ್‌ಕೆಜಿಗೆ ಸೇರಿಸಲಾಗಿತ್ತು. ಅಂಥ ಮಕ್ಕಳು ಯುಕೆಜಿ ಮುಗಿಸುವಾಗ ಐದುವರೆ ವರ್ಷ ಮಾತ್ರ ಆಗಿರುತ್ತದೆ. ಆಗ ಅವರಿಗೆ ಒಂದನೇ ತರಗತಿಗೆ ಪ್ರವೇಶ ನೀಡುವುದಿಲ್ಲ ಎಂದಾದರೆ ಮತ್ತೆ ಯುಕೆಜಿಯಲ್ಲೇ ಮುಂದುವರಿಸಬೇಕಾ ಎಂಬ ಗಂಭೀರ ಪ್ರಶ್ನೆ ಎದುರಾಗಿತ್ತು.
 
ಹಲವು ಶಿಕ್ಷಣ ಸಂಸ್ಥೆಗಳು ಕೂಡಾ ಇದರ ಬಗ್ಗೆ ಗಂಭೀರ ಆಕ್ಷೇಪ ಎತ್ತಿದ್ದವು. ಮಕ್ಕಳ ಅಮೂಲ್ಯ ಒಂದು ವರ್ಷ ಹಾಳಾಗುವುದರ ಜತೆಗೆ ಒಂದೇ ತರಗತಿಯಲ್ಲಿ ಎರಡು ವರ್ಷ ಕೂರಿಸುವುದು ಮಕ್ಕಳ ಮಾನಸಿಕ ಸ್ಥಿತಿಗತಿಯ ಮೇಲೂ ಪರಿಣಾಮ ಬೀರುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಹಿನ್ನೆಲೆ ಇದೀಗ ವಯೋಮಿತಿ ನಿಗದಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಮುಂದಿನ ಸುದ್ದಿ
Show comments