ಜಾತಿಗಣತಿಗೆ ಮಾಹಿತಿ ನೀಡಿಲ್ವಾ, ಹಾಗಿದ್ರೆ ನಿಮಗೆ ಕಾದಿದೆ ಹೊಸ ರೂಲ್ಸ್

Krishnaveni K
ಮಂಗಳವಾರ, 14 ಅಕ್ಟೋಬರ್ 2025 (11:05 IST)
ಬೆಂಗಳೂರು: ಕರ್ನಾಟಕ ಸರ್ಕಾರ ನಡೆಸಿರುವ ಜಾತಿಗಣತಿ ಸಮೀಕ್ಷೆಯಲ್ಲಿ ಕೆಲವರು ಪಾಲ್ಗೊಂಡಿಲ್ಲ. ಅಂತಹವರಿಗೆ ಇದೊಂದು ಕಡ್ಡಾಯ ನಿಯಮ ತರಲು ಸರ್ಕಾರ ಮುಂದಾಗಿದೆ.

ಜಾತಿಗಣತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದು ಕಡ್ಡಾಯವಲ್ಲ ಎಂದು ಹೈಕೋರ್ಟ್ ಆದೇಶ ನೀಡಿತ್ತು. ಅದರಂತೆ ಕೆಲವರು ತಮ್ಮ ವೈಯಕ್ತಿಕ ಮಾಹಿತಿ ಹಂಚಿಕೊಳ್ಳಲು ಇಷ್ಟವಿಲ್ಲ ಎಂದು ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ನಿರಾಕರಿಸಿದ್ದಾರೆ.

ಇದೀಗ ಸಮೀಕ್ಷೆಯಲ್ಲಿ ಪಾಲ್ಗೊಳ್ಳದವರಿಗೆ ದೃಢೀಕರಣ ಪತ್ರ ಕಡ್ಡಾಯಗೊಳಿಸಲು ಹಿಂದುಳಿದ ಆಯೋಗ ನಿರ್ಧರಿಸಿದೆ. ಜಾತಿಗಣತಿಯಿಂದ ದೂರ ಉಳಿಯುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲು ಮುಂದಾಗಿದೆ. ಹೀಗಾಗಿ ಮಾಹಿತಿ ನಿರಾಕರಿಸಿದರೆ ಮುಚ್ಚಳಿಕೆ ಪತ್ರ ಬರೆಸಿ ಸಹಿ ಹಾಕುವುದು ಕಡ್ಡಾಯಗೊಳಿಸಲು ಚಿಂತನೆ ನಡೆಸಿದೆ.

ಸಮೀಕ್ಷೆಯಲ್ಲಿ ಪಾಲ್ಗೊಳ್ಳದೇ ಇರುವುದರಿಂದ ಸಮೀಕ್ಷೆ ಅಪೂರ್ಣ ಎಂದು ಹೇಳುವ ಸಾಧ್ಯತೆಯಿದೆ. ಇದರಿಂದ ಮತ್ತೆ ಈ ಜಾತಿಗಣತಿಯೂ ವಿಫಲ ಎಂದು ಬಿಂಬಿಸುವ ಸಾಧ್ಯತೆಯಿದೆ. ಈ ಕಾರಣಕ್ಕೆ ಎಲ್ಲಾ ಕಡೆ ಸಮೀಕ್ಷೆಯಾಗಿದೆ ಎಂದು ದೃಢೀಕರಿಸಲು ಇಂತಹದ್ದೊಂದು ಮುಚ್ಚಳಿಕೆ ಬರೆದು ಸಹಿ ಹಾಕಿಸಲು ಚಿಂತನೆ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments