ಆಸ್ತಿ ನೋಂದಣಿಗೆ ಇನ್ನು ಈ ದಾಖಲೆಗಳು ಕಡ್ಡಾಯ: ಬದಲಾದ ನಿಯಮ ಹೀಗಿದೆ

Krishnaveni K
ಮಂಗಳವಾರ, 27 ಆಗಸ್ಟ್ 2024 (09:00 IST)
Photo Credit: Facebook
ಬೆಂಗಳೂರು: ಆಸ್ತಿ ನೋಂದಣಿ ಮಾಡಿಕೊಳ್ಳುವವರಿಗೆ ರಾಜ್ಯ ಸರ್ಕಾರ ಹೊಸ ನಿಯಮವನ್ನು ಕಡ್ಡಾಯಗೊಳಿಸಿದ್ದು, ಇನ್ನು ಮುಂದೆ ಈ ಕೆಲವು ದಾಖಲೆಗಳನ್ನು ಸಲ್ಲಿಸಲೇಬೇಕಾಗುತ್ತದೆ. ಬದಲಾದ ನಿಯಮದ ಬಗ್ಗೆ ಇಲ್ಲಿದೆ ಡೀಟೈಲ್ಸ್.

ಇತ್ತೀಚೆಗಿನ ದಿನಗಳಲ್ಲಿ ಯಾರದ್ದೋ ಆಸ್ತಿಯನ್ನು ತನ್ನ ಆಸ್ತಿಯೆಂದು ವಂಚಿಸುವುದು, ನಕಲಿ ದಾಖಲೆ ನೀಡಿ ಆಸ್ತಿ ಕಬಳಿಸುವುದು ಇತ್ಯಾದಿ ವಂಚನೆಗಳ ಬಗ್ಗೆ ದೂರುಗಳು ಕೇಳಿಬರುತ್ತಲೇ ಇವೆ. ಈ ಹಿನ್ನಲೆಯಲ್ಲಿ ಕಂದಾಯ ಇಲಾಖೆ ಆಸ್ತಿ ನೋಂದಣಿ ನಿಯಮಾವಳಿಗೆ ಕೆಲವು ತಿದ್ದುಪಡಿಗಳನ್ನು ತಂದಿದೆ.

ಈ ಬಗ್ಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದಾರೆ. ಇಂದಿನಿಂದ ಎಲ್ಲಾ ಆಸ್ತಿ ವಾರಸುದಾರರು ಉಪನೋಂದಣಿ ಕಚೇರಿಯಲ್ಲಿ ತಮ್ಮ ಪಾಸ್ ಪೋರ್ಟ್, ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್ ಈ ಮೂರು ದಾಖಲೆಗಳಲ್ಲಿ ಒಂದನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ.

ಇನ್ನು ಆಸ್ತಿ ನೋಂದಣಿಗೆ ಸೆಪ್ಟೆಂಬರ್ 2 ರಿಂದ ಅನ್ವಯವಾಗುವಂತೆ ಆಯಾ ಜಿಲ್ಲೆಯ ಯಾವುದೇ ಉಪನೋಂದಣಿ ಕಚೇರಿಗೆ ತೆರಳಿ ಆಸ್ತಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. ಜನಜಂಗುಳಿ ತಡೆಗಟ್ಟುವ ನಿಟ್ಟಿನಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಈ ಎರಡು ಬದಲಾವಣೆಗಳನ್ನು ಜನರ ಅನುಕೂಲ ಮತ್ತು ಹಿತದೃಷ್ಟಿಯಿಂದಲೇ ಕೈಗೊಳ್ಳಲಾಗಿದೆ. ಜನ ತಾವು ಖರೀದಿಸಿದ ಆಸ್ತಿಯನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು ಅಷ್ಟೇ ಮುಖ್ಯ. ಹೀಗಾಗಿ ವಂಚನೆ ತಡೆಯಲು ಈ ಎರಡು ಕಡ್ಡಾಯ ನಿಯಮಗಳನ್ನು ಜಾರಿಗೆ ತರಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments