Select Your Language

Notifications

webdunia
webdunia
webdunia
webdunia

ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಹೊಸ ತಿರುವು: ತನಿಖೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

Aishwarya Gowda fraud case, investigation by CID, former MP DK Suresh

Sampriya

ಬೆಂಗಳೂರು , ಬುಧವಾರ, 18 ಜೂನ್ 2025 (15:02 IST)
Photo Credit X
ಬೆಂಗಳೂರು: ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ವಂಚಿಸಿದ ಆರೋಪ ಹೊತ್ತ ಐಶ್ವರ್ಯ ಗೌಡ ವಂಚನೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.

ರಾಜ್ಯದ ಹಲವು ಪೊಲೀಸ್ ಠಾಣೆಯಲ್ಲಿ ಐಶ್ವರ್ಯ ಗೌಡ ವಿರುದ್ಧ ಕೇಸ್ ದಾಖಲಾಗಿತ್ತು. ರಾಜರಾಜೇಶ್ವರಿ ನಗರ, ಚಂದ್ರಾಲೇಔಟ್, ಮಂಡ್ಯ ಸೇರಿ ಹಲವಾರು ಕಡೆ ಕೇಸ್ ದಾಖಲಾಗಿತ್ತು. 

ಈಗ ಐಶ್ವರ್ಯ ಗೌಡ ವಂಚನೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಸಿಡಿಆರ್ ಪ್ರಕರಣ ಹೊರತು ಪಡಿಸಿ ಉಳಿದ ಪ್ರಕರಣದ ತನಿಖೆ ನಡೆಸಲು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಸಿಐಡಿಯ ಆರ್ಥಿಕ ಅಪರಾಧ ವಿಭಾಗಕ್ಕೆ ಕೇಸ್ ವರ್ಗಾವಣೆ ಮಾಡಲಾಗಿದೆ. 

ಪ್ರಕರಣ ಸಂಬಂಧ ಬ್ಯಾಟರಾಯನಪುರ ಉಪವಿಭಾಗದ ಪೊಲೀಸರು ಕೇಸ್‌ನ ತನಿಖೆ ನಡೆಸಿದ್ದರು. ಇದೀಗ ಮುಂದಿನ ತನಿಖೆಗೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಮತ್ತೊಂದು ಕಡೆ ಇಡಿಯಿಂದ ಕೂಡ ವಂಚನೆ ಕೇಸ್ ತನಿಖೆ ನಡೆಯುತ್ತಿದೆ. 

ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಐಶ್ವರ್ಯ ಗೌಡಳನ್ನು ಬಂಧಿಸಿ ಜೈಲಿಗೆ ಕಳಿಸಿದ್ದರು. ಆದಾದ ಬಳಿಕ ಮಾಜಿ ಸಂಸದ ಡಿ.ಕೆ ಸುರೇಶ್ ಕೂಡ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಇಡಿ ನೋಟಿಸ್ ಕೊಟ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Viral video: ಹೆದ್ದಾರಿಯಲ್ಲಿ ಬೈಕ್ ರೈಡ್ ವೇಳೆ ಜೋಡಿ ಜೀವಗಳ ರೊಮ್ಯಾನ್ಸ್: ಕೊನೆಗೆ ಆಗಿದ್ದೇನು