Webdunia - Bharat's app for daily news and videos

Install App

ನವಜಾತ ಶಿಶು ಮಾರಾಟ !

Webdunia
ಬುಧವಾರ, 27 ಏಪ್ರಿಲ್ 2022 (09:52 IST)
ಹಳಿಯಾಳ :  ಹಣದ ಆಸೆಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸಿದ ನವಜಾತ ಶಿಶು ಮಾರಾಟ ಮಾಡಿದ ಆರೋಪದಡಿ ಐವರನ್ನು ಪೊಲೀಸರು ಬಂಧಿಸಿದ ಘಟನೆ ಸೋಮವಾರ ಸಂಜೆ ವರದಿಯಾಗಿದೆ.

ತಟ್ಟಿಗೇರಿ ಗ್ರಾಪಂನ ಗೌಳಿವಾಡದ ಸಂತ್ರಸ್ತೆ ಸಾವಿತ್ರಿ 6 ದಿನದ ಹಿಂದೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು.

ಹಣದಾಸೆಗಾಗಿ ಅವಳ ಸ್ವಂತ ಸಹೋದರ ಭಯ್ಯಾ ಪಟಕಾರೆ (30), ಆಶಾ ಕಾರ್ಯಕರ್ತೆ ರೋಜಿ ದಬಾಲಿ (35), ಅಗಸಲಕಟ್ಟಾಗ್ರಾಮದ ಮಮತಾಜ ಹಳಬ (30) ಅವರು ಸೇರಿ ತಾಯಿಯನ್ನು ಪುಸಲಾಯಿಸಿ ಮಗುವನ್ನು ಕೇವಲ .25 ಸಾವಿರಕ್ಕೆ ಯಲ್ಲಾಪೂರ ತಾಲೂಕಿನ ಕಿರವತ್ತಿಯ ದಂಪತಿ ಅಬ್ದುಲ್ ರೆಹಮಾನ್ ಪಟೇಲ್, ರಾಹತ್ ಪಟೇಲ್ (38) ದಂಪತಿಗಳಿಗೆ ಮಾರಾಟ ಮಾಡಿದ್ದರು.

ಈ ಕುರಿತು ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಿಡಿಪಿಒ ಡಾ. ಲಕ್ಷ್ಮಿದೇವಿ ಅವರು, ಪಿಎಸ್ಐ ಶಿವಾನಂದ ನಾವದಗಿ, ಪಿಡಿಒ ಮಹಾಂತೇಶ ಹುರಕಡ್ಲಿ, ವಲಯ ಮೇಲ್ವಿಚಾರಕಿ ರಾಜೇಶ್ವರಿ ಕಟ್ಟಿಮನಿ, ಪೊಲೀಸ್ ಕಾನ್ಸ್ಟೇಬಲ್ ರಮ್ಯಾ ಅವರ ಜೊತೆ ಸೋಮವಾರ ಸಂಜೆ ಅರಣ್ಯದ ಅಂಚಿನಲ್ಲಿರುವ ತಟ್ಟಿಗೇರಿ ಗೌಳಿವಾಡಕ್ಕೆ ತೆರಳಿ ಕಾರ್ಯಾಚರಣೆ ನಡೆಸಿ ಪರಿಶೀಲಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದರು.

ಕಾರವಾರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ಮಂಗಳವಾರ ಯಲ್ಲಾಪೂರದ ಕಿರವತ್ತಿಯ ದಂಪತಿ ಮನೆಗೆ ತೆರಳಿ ಶಿಶುವನ್ನು ರಕ್ಷಿಸಿದ್ದಾರೆ. ಬಳಿಕ ಶಿರಸಿಯ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರಿಸಿದರು. ಈ ಬಗ್ಗೆ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಮುಂದಿನ ಸುದ್ದಿ
Show comments