Publish Date: Thu, 28 Apr 2022 (15:31 IST)
Updated Date: Thu, 28 Apr 2022 (20:00 IST)
ಬೆಂಗಳೂರು : ಸಂಪುಟದಲ್ಲಿ ನಾಲ್ಕು ಸಚಿವ ಸ್ಥಾನಗಳು ಖಾಲಿ ಇವೆ. ಅವುಗಳನ್ನು ಬೇರೆಯವರು ಹೆಚ್ಚುವರಿಯಾಗಿ ನಿರ್ವಹಣೆ ಮಾಡುತ್ತಾರೆ.
ಅವರ ಬದಲು ಹೊಸಬರಿಗೆ ಅವಕಾಶ ಮಾಡಿಕೊಡಬೇಕು. ಇದರಿಂದ ಅಗ್ರೆಸ್ಸಿವ್ ಆಗಿ ಕೆಲಸ ಮಾಡುತ್ತಾರೆ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಸಂಪುಟ ವಿಳಂಬಕ್ಕೆ ಅಸಮಾದಾನ ವ್ಯಕ್ತಪಡಿಸಿದ ಶಾಸಕರು, ಸಂಘಟನೆ ಹಾಗೂ ಸರ್ಕಾರಕ್ಕೆ ಹೆಸರು ಬರುತ್ತದೆ. ಐದು ಸ್ಥಾನಗಳು ಖಾಲಿ ಇವೆ.
ಸಂಪುಟ ವಿಸ್ತರಣೆ ಇಷ್ಟೊಂದು ವಿಳಂಬ ಮಾಡಬಾರದಿತ್ತು. ಚುನಾವಣೆಗೆ ಇನ್ನು 8-9 ತಿಂಗಳು ಮಾತ್ರ ಬಾಕಿ ಇದೆ. ಚುನಾವಣೆ ದೃಷ್ಟಿಯಿಂದ ಸಂಪುಟ ವಿಸ್ತರಣೆ ಆಗಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಹಾಲಿ ಸಚಿವರ ವಿರುದ್ಧ ಮತ್ತೆ ಸಿಡಿದೆದ್ದ ರೇಣುಕಾಚಾರ್ಯ, ಬರೀ ನಾಮಕಾವಸ್ತೆಗೆ ಮಾತ್ರ ಸಚಿವರಾಗಬಾರದು. ಜಿಲ್ಲಾ ಮಂತ್ರಿ ಆದಮೇಲೆ ಜಿಲ್ಲೆಯ ಸಮಸ್ಯೆ ಸರಿಪಡಿಸಬೇಕು. ತಾಲೂಕು ಜಿಲ್ಲೆಯಲ್ಲಿ ಓಡಾಡಿ ಪಕ್ಷ ಸಂಘಟನೆ ಸರ್ಕಾರದ ವರ್ಚಸ್ಸು ಹೆಚ್ಚು ಮಾಡಬೇಕು.
ಬಿಲಿಯನೇರ್ಗಳ ಪಟ್ಟಿಯಲ್ಲಿ ಅದಾನಿಗಿಂತ ಮೊದಲಿನ ಸ್ಥಾನದಲ್ಲಿಒ ಟೆಸ್ಲಾ ಮುಖ್ಯಸ್ಥ ಎಲೋನ್ ಮಸ್ಕ್(19 ಲಕ್ಷ ಕೋಟಿ ರೂ.), ಅಮೇಜಾನ್ ಸಂಸ್ಥಾಪಕ ಜೆಫ್ ಬೆಜೋಸ್(12.5 ಲಕ್ಷ ಕೋಟಿ ರೂ.), ಫ್ರಾನ್ಸಿನ ಉದ್ಯಮಿ ಎಲ್ವಿಎಂಎಚ್ ಮುಖ್ಯಸ್ಥ ಬರ್ನಾರ್ಡ್ ಅರ್ನಾಲ್ಟ್(10.2 ಲಕ್ಷ ಕೋಟಿ ರೂ.) ಮತ್ತು ಬಿಲ್ ಗೇಟ್ಸ್ ಹೆಸರುಗಳಿವೆ.
ಆದರೆ ಅವರೆಲ್ಲರ ಆಸ್ತಿ ನಿರಂತರವಾಗಿ ಕುಸಿಯುತ್ತಿದೆ. ಆದರೆ ಅದಾನಿ ನಿರಂತರವಾಗಿ ಏರಿಕೆ ಕಾಣುತ್ತಿದೆ. ಗೌತಮ್ ಅದಾನಿ ಸಂಪತ್ತು ಈ ವೇಗದಲ್ಲೇ ಸಾಗಿದರೆ ಶೀಘ್ರದಲ್ಲೇ ಅವರು ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮುವ ಸಾಧ್ಯತೆಯಿದೆ.