Publish Date: Tue, 06 Sep 2022 (14:22 IST)
Updated Date: Tue, 06 Sep 2022 (16:24 IST)
ಮಂಗಳೂರು : ಇಷ್ಟವಿಲ್ಲದ ವಿವಾಹ ಮಾಡಿದ್ದಕ್ಕೆ ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಅಂಬ್ಲಮೊಗರಿನಲ್ಲಿ ನಡೆದಿದೆ.
ರಶ್ಮಿ (24) ಆತ್ಮಹತ್ಯೆಗೆ ಶರಣಾದ ನವ ವಿವಾಹಿತೆ. 15 ದಿನಗಳ ಹಿಂದೆ ರಶ್ಮಿ ಗಂಜಮಠ ಮೂಲದ ದುಬೈಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಅವರನ್ನು ವಿವಾಹವಾಗಿದ್ದರು.
ಆದರೆ ಸೆಪ್ಟೆಂಬರ್ 3 ರಂದು ಕೋಡಿಕಲ್ನ ತನ್ನ ಅಕ್ಕನ ಮನೆಗೆ ಬಂದಿದ್ದ ರಶ್ಮಿ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥಗೊಂಡಿದ್ದರು.
ನಂತರ ಗಂಭೀರ ಸ್ಥಿತಿಯಲ್ಲಿದ್ದ ರಶ್ಮಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ, ರಶ್ಮಿ ಮೃತಪಟ್ಟಿದ್ದಾರೆ.