Webdunia - Bharat's app for daily news and videos

Install App

9 ದಿನಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ಅಪಹರಣ?

Webdunia
ಭಾನುವಾರ, 8 ಜುಲೈ 2018 (14:50 IST)
9 ದಿನದ ಹಿಂದೆ ವಿವಾಹವಾಗಿದ್ದ ನವ ವಿವಾಹಿತೆಯೊಬ್ಬಳನ್ನು   ವ್ಯಕ್ತಿಯೊಬ್ಬ ಅಪಹರಿಸಿರುವ ಕುರಿತು ಅಪಹರಣಕ್ಕೊಳಗಾದ ವಿವಾಹಿತಳ ಪತಿ ಇಲ್ಲಿನ ಠಾಣೆಯಲ್ಲಿ  ದೂರು ದಾಖಲಿಸಿದ್ದಾರೆ.


ಕಾರವಾರ ತಾಲೂಕಿನ ಬಾಡದ ನಿವಾಸಿ ಸಚಿನ್ ನಾಯ್ಕ ಎಂಬುವವರು ಜೂನ್ 28 ರಂದು ಅಂಕೋಲಾ ತಾಲೂಕಿನ  ಅವರ್ಸಾದ ದಿವ್ಯಾ ನಾಯ್ಕ ಎಂಬ ಯುವತಿಯನ್ನು ವಿವಾಹವಾಗಿದ್ದರು.ವಿವಾಹದ ಬಳಿಕ ಅನ್ಯೋನ್ಯವಾಗಿದ್ದ ಈ ದಂಪತಿ ಜುಲೈ 2 ಮತ್ತು 3ಕ್ಕೆ ಗ್ರಾಮ ದೇವರು,ಕುಲ ದೇವರಿಗೆ ಪೂಜೆ ಸಲ್ಲಿಸಿ ಬಂದಿದ್ದರು.

ಅದರ ಬಳಿಕ ಜುಲೈ 4 ರಂದು ದಿವ್ಯಾಳ ತವರು ಮನೆಗೆ ನೆಂಟರ ಊಟಕ್ಕೆಂದು ತೆರಳಿದ್ದ ದಂಪತಿಗೆ,ಸಂಪ್ರದಾಯದಂತೆ ನವ ವಧು ಐದು ದಿನ ತವರು ಮನೆಯಲ್ಲೇ ಇರಬೇಕೆಂದು ದಿವ್ಯಾಳ ಕುಟುಂಬದವರು ತಿಳಿಸಿದ್ದಾರೆ. ಅದರಂತೆ ದಿವ್ಯಾಳನ್ನು ತವರು ಮನೆಯಲ್ಲೇ ಬಿಟ್ಟು ಸಚಿನ್ ಮನೆಗೆ ವಾಪಾಸಾಗಿದ್ದಾನೆ. 

ತದ ನಂತರ ಜುಲೈ 6 ರ ಬೆಳಿಗ್ಗಿನವರೆಗೂ ಕರೆ ಮಾಡಿ ಮಾತನಾಡಿದ ದಿವ್ಯಾ 6 ರ ಸಂಜೆ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾಳೆ.ಬಟ್ಟೆ ಹೊಲಿಯಲು ಕೊಟ್ಟು ಬರುವುದಾಗಿ ತವರು ಮನೆಯಿಂದ ಹೊರಟ ದಿವ್ಯಾ ಈವರೆಗೂ ವಾಪಾಸಾಗಿಲ್ಲ. ಆದರೆ, ಜುಲೈ 7ರಂದು ಗದಗ ಮೂಲದ ದಿಲನ್ ಎಂಬುವವನು ಸಚಿನ್ ಗೆ ಕರೆಮಾಡಿ, ದಿವ್ಯಾಳನ್ನು ಅಪಹರಿಸಿರುವುದಾಗಿ ಹಾಗೂ ಆಕೆಯನ್ನು ಹುಡುಕಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಒಡ್ಡಿದ್ದಾನೆ.

ಇದರಿಂದಾಗಿ ಭಯಭೀತರಾಗಿರುವ ಸಚಿನ್ ಕುಟುಂಬ ದಿವ್ಯಾಳನ್ನು ಹುಡುಕಿಕೊಡುವಂತೆ ಅಂಕೋಲಾ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ. ಅವಳ ಮೈಮೇಲೆ ಒಡವೆಗ ಳಿದ್ದು, ಅವುಗಳಿಗಾಗಿ ಅಥವಾ ಇನ್ಯಾವುದೋ ಕಾರಣಕ್ಕೆ ಆಕೆಯನ್ನು ಅಪಹರಿಸಿರಬಹುದು ಎಂದು ಸಚಿನ್ ಅಭಿಪ್ರಾಯಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments