Select Your Language

Notifications

webdunia
webdunia
webdunia
webdunia

ತಮ್ಮನ ಸಾವಿನ ಸುದ್ದಿ:ನೇಣಿಗೆ ಶರಣಾದ ಅಕ್ಕ

ತಮ್ಮನ ಸಾವಿನ ಸುದ್ದಿ:ನೇಣಿಗೆ ಶರಣಾದ ಅಕ್ಕ
ಹಾವೇರಿ , ಶನಿವಾರ, 27 ನವೆಂಬರ್ 2021 (12:45 IST)
ಹಾವೇರಿ : ತಮ್ಮನ ಸಾವಿನ ಸುದ್ದಿ ತಿಳಿದು ಮನೆಗೆ ಬಂದು ಅಕ್ಕನೂ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ವಿನಾಯಕ ನಗರದಲ್ಲಿ ನಡೆದಿದೆ.
ನಾಗರಾಜ್ ಚಲವಾದಿ(16), ಭಾಗ್ಯಶ್ರೀ(18) ಮೃತರಾಗಿದ್ದಾರೆ. ಸರಿಯಾಗಿ ಶಾಲೆಗೆ ಹೋಗು ಅಂದಿದ್ದಕ್ಕೆ ಬಾಲಕ ನೇಣಿಗೆ ಶರಣಾಗಿದ್ದನು. ತಮ್ಮ ಸಾವಿಗೆ ಸುದ್ದಿ ಕೇಳಿ ಅಕ್ಕನೂ ನೇಣಿಗೆ ಶರಣಾಗಿದ್ದು, ಸಾವಿನಲ್ಲೂ ಅಕ್ಕ, ತಮ್ಮ ಒಂದಾಗಿದ್ದಾರೆ.
ಸರಿಯಾಗಿ ಶಾಲೆಗೆ ಹೋಗು ಅಂದಿದ್ದಕ್ಕೆ ಮನೆಯ ಮೇಲಿನ ಕೊಠಡಿಯಲ್ಲಿ ಬಾಲಕ ನಾಗರಾಜ್ ನೇಣಿಗೆ ಶರಣಾಗಿದ್ದಾನೆ. ತಮ್ಮನ ಸಾವಿನ ಸುದ್ದಿ ಕೇಳಿದ ಭಾಗ್ಯಶ್ರೀ ಮನೆಗೆ ಬಂದು ಅದೇ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇಬ್ಬರ ಮರಣೋತ್ತರ ಪರೀಕ್ಷೆ ನಂತರ ಅಕ್ಕ ತಮ್ಮನ ಅಂತ್ಯಕ್ರಿಯೆ ಕುಟುಂಬಸ್ಥರು ನೆರವೇರಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆ ಆಗುವಂತೆ ಯುವತಿಗೆ ಬ್ಲಾಕ್‍ಮೇಲ್! ಮುಂದೇನಾಯ್ತು?