Select Your Language

Notifications

webdunia
webdunia
webdunia
webdunia

ರಾಜ್ಯದ ಜನತೆಯ ಚಿತ್ತ ಜೆಡಿಎಸ್ ಪಕ್ಷದತ್ತ: ದೇವೇಗೌಡ

ರಾಜ್ಯದ ಜನತೆಯ ಚಿತ್ತ ಜೆಡಿಎಸ್ ಪಕ್ಷದತ್ತ: ದೇವೇಗೌಡ
ಬೆಂಗಳೂರು , ಗುರುವಾರ, 9 ಮಾರ್ಚ್ 2017 (13:12 IST)
ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ದುರಾಡಳಿತದಿಂದ ಜನತೆ ಬೇಸತ್ತಿದ್ದು, ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ನತ್ತ ಒಲವು ತೋರುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿದ್ದಾರೆ.
 
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದ ಜನಪರ ನೀತಿಗಳಿಂದಾಗಿ ಅವರೇ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿ ಎನ್ನುವುದು ಜನತೆಯ ಬಯಕೆಯಾಗಿದೆ ಎಂದು ತಿಳಿಸಿದ್ದಾರೆ. 
 
ರಾಜ್ಯವನ್ನು ಲೂಟಿ ಮಾಡಿ ಹೈಕಮಾಂಡ್‌ಗೆ ಸಾವಿರಾರು ಕೋಟಿ ರೂಪಾಯಿ ದೇಣಿಗೆ ನೀಡುತ್ತಿವೆ ಎನ್ನುವ ಆರೋಪ ಹೊತ್ತಿರುವ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಕೇಂದ್ರ ಸರಕಾರ ಕೂಡಾ ಮಲತಾಯಿ ಧೋರಣೆ ತಳೆದಿದೆ ಎಂದು ಕಿಡಿಕಾರಿದ್ದಾರೆ.
 
ಎಸ್.ಎಂ.ಕೃಷ್ಣ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನುವ ವರದಿಗಳನ್ನು ಕೇಳಿದ್ದೇನೆ. ಆದರೆ, ರಾಜಶೇಖರ್ ಮೂರ್ತಿ, ಬಂಗಾರಪ್ಪ ಅವರಿಗಾದ ಅನುಭವವನ್ನು ಕೃಷ್ಣ ಅರಿತುಕೊಂಡಲ್ಲಿ ಉತ್ತಮ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನಿರಾಶ್ರಿತ ಶಿಬಿರದಲ್ಲಿ ಬೆಂಕಿ; 19 ಮಕ್ಕಳು ಸಾವು