ಮುಂದಿನ ಸಿಎಂ ಶ್ರೀಕಂಠೇಗೌಡ ರಂತೆ

Webdunia
ಮಂಗಳವಾರ, 15 ಮಾರ್ಚ್ 2022 (15:47 IST)
ಆಮ್​ ಆದ್ಮಿ ಪಕ್ಷದಿಂದ ಕೆ.ಟಿ.ಶ್ರೀಕಂಠೇಗೌಡರು ಸಿಎಂ ಅಭ್ಯರ್ಥಿಯಾದರೆ?!
 
ಹೀಗೊಂದು ಸ್ವಾರಸ್ಯಕರ ಚರ್ಚೆಗೆ ಮೇಲ್ಮನೆ ವೇದಿಕೆಯಾಯಿತು. ಬಜೆಟ್​ ಕುರಿತು ಸೋಮವಾರ ಮಾತನಾಡುತ್ತಿದ್ದ ಜೆಡಿಎಸ್​ನ ಶ್ರೀಕಂಠೇಗೌಡ, ಉತ್ತಮ ಶಿಕ್ಷಣ ನೀಡಲು ದೆಹಲಿಯಲ್ಲಿ ಕ್ರೇಜಿವಾಲ್​ ಅವರಿಗೆ ಸಾಧ್ಯವಾಗುವುದಾದರೆ, ನಮಗೇಕೆ ಸಾಧ್ಯವಿಲ್ಲ?
ಎಲ್ಲಾ ರಾಜ್ಯಗಳಿಗೂ ಕೇಜ್ರಿವಾಲ್​ ಬರಬೇಕೆ? ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ ಬ್ಯಾಂಕ್​ ಸೇರಿ ಕೆಲ ಕ್ಷೇತ್ರಗಳನ್ನೂ ರಾಷ್ಟ್ರೀಕರಣ ಮಾಡಿದರು. ಎಲ್ಲರಿಗೂ ಸಮಾನವಾದ ಉಚಿತ ಶಿಕ್ಷಣ ಸಿಗುವಂತೆ ಶಿಕ್ಷಣ ಕ್ಷೇತ್ರವನ್ನು ಬಿಜೆಪಿ ರಾಷ್ಟ್ರೀಕರಣ ಮಾಡಲಿ ಎಂದು ಸಲಹೆ ನೀಡಿದರು.
 
ಶ್ರೀಕಂಠೇಗೌಡರ ಮಾತಿಗೆ ಕೆರಳಿದ ಬಿಜೆಪಿ ಸದಸ್ಯರು, ಹಾಗಾದರೆ ನೀವು ಎಎಪಿ ಪಕ್ಷ ಸೇರಿಕೊಳ್ಳುವುದು ಒಳಿತು ಎಂದು ಸಲಹೆ ನೀಡಿದರು. ತಕ್ಷಣವೇ ಪ್ರತಿಕ್ರಿಯಿಸಿದ ಶ್ರೀಕಂಠೇಗೌಡರು, ಅದಕ್ಕೇನಂತೆ ನನ್ನನ್ನು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎನ್ನುತ್ತಿದಂತೆ ಸದನ ನಗೆಗಡಲಲ್ಲಿ ಮುಳುಗಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಂಡಿನ ಚಕಮಕಿಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಅರೆಸ್ಟ್‌

Karnataka Weather: ಮುಂದಿನ ಐದು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments