Select Your Language

Notifications

webdunia
webdunia
webdunia
webdunia

ಮುಂದಿನ ವರ್ಷ ಬಿಎಸ್ ವೈ ನೇತೃತ್ವದಲ್ಲಿ ಇನ್ನೂ ಚೆನ್ನಾಗಿ ದಸರಾ ಆಚರಿಸುತ್ತೇವೆ- ಸಚಿವ ವಿ. ಸೋಮಣ್ಣ ವಿಶ್ವಾಸ

ಮುಂದಿನ ವರ್ಷ ಬಿಎಸ್ ವೈ ನೇತೃತ್ವದಲ್ಲಿ ಇನ್ನೂ ಚೆನ್ನಾಗಿ ದಸರಾ ಆಚರಿಸುತ್ತೇವೆ- ಸಚಿವ ವಿ. ಸೋಮಣ್ಣ ವಿಶ್ವಾಸ
ಮೈಸೂರು , ಮಂಗಳವಾರ, 8 ಅಕ್ಟೋಬರ್ 2019 (11:14 IST)
ಮೈಸೂರು : ಮುಂದಿನ ವರ್ಷವೂ ಯಡಿಯೂರಪ್ಪ ಮುಖ್ಯಮಂತ್ರಿ ಆಗಿರುತ್ತಾರೆ. ಆಗ ಇನ್ನೂ ಚೆನ್ನಾಗಿ ದಸರಾ ಆಚರಿಸುತ್ತೇವೆ ಎಂದುಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.




ಸುತ್ತೂರು ಮಠದಕ್ಕೆ ತೆರಳಿ ಶ್ರೀಗಳ ಆಶಿರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ 11 ಗಂಟೆಯವರೆಗೆ ತಾಯಿ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಲಾಗಿದೆ. ಮಳೆ ಬರುವುದು ಬೇಡವೆಂದು ತಾಯಿ ಚಾಮುಂಡೇಶ್ವರಿಯಲ್ಲಿ ಬೇಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.


ನಮ್ಮಲ್ಲಿ ಮಾತ್ರ ಸರ್ಕಾರದಿಂದ ದಸರಾ ಆಚರಣೆ ಮಾಡಲಾಗುತ್ತಿದೆ. ಮುಂದಿನ ವರ್ಷವೂ ಯಡಿಯೂರಪ್ಪ ಮುಖ್ಯಮಂತ್ರಿ ಆಗಿರುತ್ತಾರೆ. ಅವರ ನೇತೃತ್ವದಲ್ಲಿ ಇನ್ನೂ ಚೆನ್ನಾಗಿ ದಸರಾ ಆಚರಿಸುತ್ತೇವೆ ಎಂದು ಹೇಳಿದ್ದಾರೆ. ಇಂದಿನ ಜಂಬೂಸವಾರಿಗೆ ಸರ್ಕಾರ ಮತ್ತು ಜಿಲ್ಲಾಡಳಿತದಿಂದ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದಸರಾದಲ್ಲಿ ಶಾಂತಿಯಿಂದ ಪಾಲ್ಗೊಳ್ಳುವಂತೆ ಜನರಲ್ಲಿ ಸಿಎಂ ಮನವಿ