Webdunia - Bharat's app for daily news and videos

Install App

ಹೈವೇ ಪ್ರಾಧಿಕಾರ ನಿರ್ಲಕ್ಷ್ಯ

Webdunia
ಸೋಮವಾರ, 17 ಜನವರಿ 2022 (15:44 IST)
ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ದುರಸ್ತಿ ಕಾಮಗಾರಿಯಿಂದಾಗಿ ಸಂಚಾರ ದಟ್ಟಣೆ ತೀವ್ರಗೊಂಡು ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ತಕ್ಷಣವೇ ಅಧಿಕಾರಿಗಳು ಎಚ್ಚೆತ್ತುಕೊಂಡು ದುರಸ್ತಿ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಭಾರೀ ಅನಾಹುತವೊಂದು ತಪ್ಪಿದೆ. ಆದರೆ ಕಾಮಗಾರಿ ನಿಗದಿತ ಅವಧಿಯಲ್ಲಿ ಮುಗಿಯದೇ ಇರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
 
ಮೇಲ್ಸೇತುವೆಯ ಲಿಂಕ್‍ಗಳನ್ನು ಸರಿಪಡಿಸಲು ಕೇಬಲ್ ಟೈಟ್ ಕಾಮಗಾರಿ ಆರಂಭಿಸಲಾಗಿದೆ. ಇದು ಜ.14ಕ್ಕೆ ಮುಗಿಯಲಿದೆ ಎಂಬ ಭರವಸೆ ನೀಡಲಾಗಿತ್ತು. ಆದರೆ ಸದ್ಯದ ಕಾಮಗಾರಿ ವೇಗ ನೋಡಿದರೆ ಇನ್ನು 15-20 ದಿನಗಳಾದರೂ ಪೂರ್ಣಗೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ.
 
ಒಂದು ತಂಡ ಮಾತ್ರ ಕೇಬಲ್ ಟೈಟ್ ಕಾಮಗಾರಿಯಲ್ಲಿ ತೊಡಗಿಸಿಕೊಂಡಿದೆ. ಕನಿಷ್ಠ ಮೂರು ತಂಡಗಳು ಕಾರ್ಯಾಚರಣೆ ನಡೆಸಿದರೆ ನಿಗದಿತ ಅವಧಿಯಲ್ಲಿ ಕೆಲಸ ಮುಗಿಸಬಹುದಿತ್ತು. ಆದರೆ ಒಂದು ತಂಡ ಮಾತ್ರ ಕೆಲಸ ನಿರ್ವಹಿಸುತ್ತಿದೆ. ಇದರಿಂದ ಕಾಮಗಾರಿ ಆಮೆ ಗತಿಯಲ್ಲಿ ಸಾಗುತ್ತಿದೆ.
 
ಮೇಲ್ಸೇತುವೆ ಇಲ್ಲದೆ ಇದ್ದುದ್ದರಿಂದ 8ನೇ ಮೈಲಿಯಿಂದ ಯಶವಂತಪುರದವರೆಗೆ ಸಂಚಾರ ದಟ್ಟಣೆ ಮಿತಿಮೀರಿದೆ. ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುವ ಸುಮಾರು 25 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯಲ್ಲಿ ಮೇಲ್ಸೇತುವೆ ದುರಸ್ತಿ ಕಾಮಗಾರಿ ವಿಳಂಬವಾಗಿ ನಡೆಯುತ್ತಿರುವುದು ಜನರ ಆಕ್ರೋಶಕ್ಕೆ ಗುರಿಯಾಗಿದೆ.
 
ಸುಮಾರು 7-8 ಕಿ.ಮೀ ದೂರವನ್ನು ಕ್ರಮಿಸಲು ಒಂದರಿಂದ 2 ಗಂಟೆಗಳ ಕಾಲ ವ್ಯಯಿಸಬೇಕಾದ ಅನಿವಾರ್ಯತೆ ವಾಹನ ಸವಾರರದ್ದಾಗಿದೆ.ಮೇಲ್ಸೇತುವೆ ಇದ್ದ ವೇಳೆ ಸುಮಾರು 7ರಿಂದ ಹತ್ತು ನಿಮಿಷಗಳ ಅವಯಲ್ಲಿ ಪ್ರಯಾಣಿಸಬಹುದಿತ್ತು. ದುರಸ್ತಿ ಕಾಮಗಾರಿಗಾಗಿ ಸೇತುವೆ ಸಂಚಾರ ನಿಷೇಸಲಾಗಿದೆ. ಕೆಳಭಾಗದಲ್ಲಿ ಸಂಚರಿಸುವ ವಾಹನಗಳು ಪರದಾಡುವಂತಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಹೆಬ್ಬಾಳ ಫ್ಲೈ ಓವರ್ ಉದ್ಘಾಟನೆ ವೇಳೆಯೇ ಟ್ರಾಫಿಕ್ ಜಾಮ್: ತೇಜಸ್ವಿ ಸೂರ್ಯ ಅಸಮಾಧಾನ

ಮುಂದಿನ ಸುದ್ದಿ
Show comments