Webdunia - Bharat's app for daily news and videos

Install App

ಆರು ಮಂದಿ ಆರೋಪಿಗಳ ವಿರುದ್ಧ ಎನ್‍ಐಎ ವಿಶೇಷ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ

Webdunia
ಬುಧವಾರ, 6 ಅಕ್ಟೋಬರ್ 2021 (18:50 IST)
ಮಾನವ ಕಳ್ಳ ಸಾಗಾಣಿಕೆ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಆರು ಮಂದಿ ಆರೋಪಿಗಳ ವಿರುದ್ಧ ಎನ್‍ಐಎ ವಿಶೇಷ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದೆ. 
ತಮಿಳುನಾಡು ಮೂಲದ ದಿನಕರಣ್, ಕಾಶಿ ವಿಶ್ವನಾಥನ್, ರಸೊಲ್, ಸದ್ದಮ್‍ಹುಸೇನ್, ಅಬ್ದುಲ್ ಮುಹೀತು, ಸಾಕ್ರೆಟಿಸ್ ವಿರುದ್ಧ ಮಾನವ ಕಳ್ಳಸಾಗಾಣಿಕ ಪ್ರಕರಣದ ಸಂಬಂಧ ಎನ್‍ಐಎ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಲಾಗಿದೆ. 
ಏನಿದು ಪ್ರಕರಣ?
ಶ್ರೀಲಂಕಾದ  ಪ್ರಜೆಗಳು ಮಂಗಳೂರಿನ ಲಾಡ್ಜ್‍ವೊಂದರಲ್ಲಿ  ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ವಾಸವಿದ್ದರು. ಈ ವೇಳೆ ಮಂಗಳೂರು ದಕ್ಷಿಣ ಠಾಣೆ ಪೆÇಲೀಸರು ಜೂ.10ರಂದು ದಾಳಿ ನಡೆಸಿ  25 ಮಂದಿ ಶ್ರೀಲಂಕಾ ಪ್ರಜೆಗಳನ್ನು ಬಂಧಿಸಿದ್ದರು. ಅನಂತರದ ದಾಳಿಯಲ್ಲಿ  ಹೆಚ್ಚುವರಿಯಾಗಿ 13 ಮಂದಿ ಶ್ರೀಲಂಕಾ ಪ್ರಜೆಗಳನ್ನು ಬಂಧಿಸಿ ವಿದೇಶಿ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು. 
ಎನ್‍ಐಎ ಈ ಪ್ರಕರಣವನ್ನು ಕೈಗೆತ್ತಿಕೊಂಡು ತನಿಖೆ ನಡೆಸಿದ ವೇಳೆ 2021ರ ಫೆ. 27ರಿಂದ ಏ. 10ರವರೆಗೆ ಶ್ರೀಲಂಕಾದಿಂದ ಭಾರತಕ್ಕೆ 38 ಮಂದಿಯನ್ನು ಕಳ್ಳ ಸಾಗಾಣಿಕೆ ಮಾಡಿರುವುದು ಪತ್ತೆಯಾಗಿತ್ತು. ಕುಟುಂಬದೊಂದಿಗೆ ನಿಕಟ ಸಂಪರ್ಕವಿಲ್ಲದೆ ಬೇರ್ಪಟ್ಟಿರುವ ಶ್ರೀಲಂಕಾ, ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ಪ್ರಜೆಗಳನ್ನು ಹಡಗಿನ ಮೂಲಕ ಕೆನಾಡ ದೇಶಕ್ಕೆ ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು. ಶ್ರೀಲಂಕಾದ 38 ಕಳ್ಳ ಸಾಗಾಣಿಕೆಯ ಪ್ರಜೆಗಳಿಗೂ ತಲಾ 3.5 ರಿಂದ 10 ಲಕ್ಷ ರೂ. ಕೊಡುವುದಾಗಿ ತಿಳಿಸಿದ್ದರು.  ಒಟ್ಟು 1.83 ಕೋಟಿ ರೂ. ಅನ್ನು ಶ್ರೀಲಂಕಾದ ರೂಪಾಯಿ ಹಾಗೂ ಭಾರತದ ರೂಪಾಯಿಯಲ್ಲಿ ಕೊಡುವುದಾಗಿ ಭರವಸೆ ನೀಡಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments