Webdunia - Bharat's app for daily news and videos

Install App

ಆರು ಮಂದಿ ಆರೋಪಿಗಳ ವಿರುದ್ಧ ಎನ್‍ಐಎ ವಿಶೇಷ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ

Webdunia
ಬುಧವಾರ, 6 ಅಕ್ಟೋಬರ್ 2021 (18:50 IST)
ಮಾನವ ಕಳ್ಳ ಸಾಗಾಣಿಕೆ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಆರು ಮಂದಿ ಆರೋಪಿಗಳ ವಿರುದ್ಧ ಎನ್‍ಐಎ ವಿಶೇಷ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದೆ. 
ತಮಿಳುನಾಡು ಮೂಲದ ದಿನಕರಣ್, ಕಾಶಿ ವಿಶ್ವನಾಥನ್, ರಸೊಲ್, ಸದ್ದಮ್‍ಹುಸೇನ್, ಅಬ್ದುಲ್ ಮುಹೀತು, ಸಾಕ್ರೆಟಿಸ್ ವಿರುದ್ಧ ಮಾನವ ಕಳ್ಳಸಾಗಾಣಿಕ ಪ್ರಕರಣದ ಸಂಬಂಧ ಎನ್‍ಐಎ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಲಾಗಿದೆ. 
ಏನಿದು ಪ್ರಕರಣ?
ಶ್ರೀಲಂಕಾದ  ಪ್ರಜೆಗಳು ಮಂಗಳೂರಿನ ಲಾಡ್ಜ್‍ವೊಂದರಲ್ಲಿ  ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ವಾಸವಿದ್ದರು. ಈ ವೇಳೆ ಮಂಗಳೂರು ದಕ್ಷಿಣ ಠಾಣೆ ಪೆÇಲೀಸರು ಜೂ.10ರಂದು ದಾಳಿ ನಡೆಸಿ  25 ಮಂದಿ ಶ್ರೀಲಂಕಾ ಪ್ರಜೆಗಳನ್ನು ಬಂಧಿಸಿದ್ದರು. ಅನಂತರದ ದಾಳಿಯಲ್ಲಿ  ಹೆಚ್ಚುವರಿಯಾಗಿ 13 ಮಂದಿ ಶ್ರೀಲಂಕಾ ಪ್ರಜೆಗಳನ್ನು ಬಂಧಿಸಿ ವಿದೇಶಿ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು. 
ಎನ್‍ಐಎ ಈ ಪ್ರಕರಣವನ್ನು ಕೈಗೆತ್ತಿಕೊಂಡು ತನಿಖೆ ನಡೆಸಿದ ವೇಳೆ 2021ರ ಫೆ. 27ರಿಂದ ಏ. 10ರವರೆಗೆ ಶ್ರೀಲಂಕಾದಿಂದ ಭಾರತಕ್ಕೆ 38 ಮಂದಿಯನ್ನು ಕಳ್ಳ ಸಾಗಾಣಿಕೆ ಮಾಡಿರುವುದು ಪತ್ತೆಯಾಗಿತ್ತು. ಕುಟುಂಬದೊಂದಿಗೆ ನಿಕಟ ಸಂಪರ್ಕವಿಲ್ಲದೆ ಬೇರ್ಪಟ್ಟಿರುವ ಶ್ರೀಲಂಕಾ, ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ಪ್ರಜೆಗಳನ್ನು ಹಡಗಿನ ಮೂಲಕ ಕೆನಾಡ ದೇಶಕ್ಕೆ ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು. ಶ್ರೀಲಂಕಾದ 38 ಕಳ್ಳ ಸಾಗಾಣಿಕೆಯ ಪ್ರಜೆಗಳಿಗೂ ತಲಾ 3.5 ರಿಂದ 10 ಲಕ್ಷ ರೂ. ಕೊಡುವುದಾಗಿ ತಿಳಿಸಿದ್ದರು.  ಒಟ್ಟು 1.83 ಕೋಟಿ ರೂ. ಅನ್ನು ಶ್ರೀಲಂಕಾದ ರೂಪಾಯಿ ಹಾಗೂ ಭಾರತದ ರೂಪಾಯಿಯಲ್ಲಿ ಕೊಡುವುದಾಗಿ ಭರವಸೆ ನೀಡಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments