Webdunia - Bharat's app for daily news and videos

Install App

ಎನ್​​ಐಎ ಕಾಟಾಚಾರಕ್ಕೆ ತನಿಖೆ ಮಾಡಬಾರದು-ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಗ್ರಹ

Webdunia
ಸೋಮವಾರ, 1 ಆಗಸ್ಟ್ 2022 (16:14 IST)
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್​​ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಸರ್ಕಾರ ಎನ್​​ಐಎಗೆ ಕೊಟ್ಟು ನಮ್ಮಲ್ಲಿರುವ ಉತ್ತಮ ಪೊಲೀಸ್ ಅಧಿಕಾರಿಗಳ ಆತ್ಮಸ್ಥೈರ್ಯವನ್ನು ಕುಸಿಯುವಂತೆ ಮಾಡಿದೆ. ಎನ್​​ಐಎಗೆ ಈ ಹಿಂದೆ ಕೊಟ್ಟ ಯಾವುದೇ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆ ಮಾಡಿಲ್ಲ. ಆದರೆ ಈ ಪ್ರಕರಣವನ್ನು ಎನ್​​ಐಎ ಕಾಟಾಚಾರಕ್ಕೆ ತನಿಖೆ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
 
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆಇಂದು ಬೆಳಗೆ ಬೆಳ್ಳಾರೆಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರು ಹಾಗೂ ವಿಷ್ಣುನಗರ ಕಲೆಂಜದ ಮಹಮ್ಮದ್ ಮಸೂದ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಹೇಳುವುದು ಇಷ್ಟೇ. ಈ ಪ್ರಕರಣದ ತನಿಖೆ ಕಾಟಾಚಾರಕ್ಕೆ ಆಗಬಾರದು. ಈಗಾಗಲೇ ನಮ್ಮಲ್ಲಿ ಸಮರ್ಪಕವಾಗಿ ತನಿಖೆ ಮಾಡುವ ಅಧಿಕಾರಿಗಳನ್ನು ಬದಿಗೊತ್ತಿ ತನಿಖೆ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಈ ಕುಟುಂಬಗಳು ನ್ಯಾಯದಿಂದ ವಂಚಿತರಾಗಬಾರದು ಎಂದರು.
 
ಈಗಾಗಲೇ ಈ ಎರಡು ಕುಟುಂಬಗಳಿಗೆ ನಮ್ಮ ಕಡೆಯಿಂದ ಸ್ವಲ್ಪ ಮಟ್ಟಿಗೆ ಪರಿಹಾರ ನೀಡಿದ್ದೇವೆ. ಯಾವುದೇ ಸಮಸ್ಯೆ ಎದುರಾದಲ್ಲಿ ತಮ್ಮನ್ನು ಸಂಪರ್ಕಿಸುವಂತೆ ದೂರವಾಣಿ ಸಂಖ್ಯೆಯನ್ನೂ ನೀಡಿರುವುದಾಗಿ ಕುಮಾರಸ್ವಾಮಿ ಹೇಳಿದ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments