ಆಟೋ ಚಾಲರಿಗೆ ನೈಟ್ ಕರ್ಫ್ಯೂ ನುಂಗಲಾರದ ಬಿಸಿ ತುಪ್ಪ

Webdunia
ಸೋಮವಾರ, 27 ಡಿಸೆಂಬರ್ 2021 (15:46 IST)
ಒಮಿಕ್ರಾನ್ ಆತಂಕದ ಹಿನ್ನೆಲೆ ಡಿಸೆಂಬರ್ 28 ರಿಂದ ನೈಟ್ ಕರ್ಫ್ಯೂ ಜಾರಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಆದ್ರೆ ಸರ್ಕಾರದ ಈ ನಿರ್ಧಾರದ ಬಗ್ಗೆ ಆಟೋ & ಟ್ಯಾಕ್ಸಿ ಮಾಲೀಕರ ಸಂಘ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೈಟ್ ಕರ್ಫ್ಯೂ ರೂಲ್ಸ್ ಎಫೆಕ್ಟ್ ನಿಂದ ಆಟೋದವರಿಗೆ ಸಂಕಷ್ಟ ಎದುರಾಗಿದ್ದು, ರಾತ್ರಿ ವೇಳೆ ಸಂಚರಿಸುತ್ತಿದ್ದ ಆಟೋದವರಿಗೆ ಈ ನಿರ್ಧಾರದಿಂದ ಸಮಸ್ಯೆಯಾಗುತ್ತೆ.ಕೊರೊನಾ ನಂತರ ದುಡಿಮೆ ಇಲ್ಲದೇ ಸಾಕಷ್ಟು ಚಾಲಕರು ರಾತ್ರಿ ಕೆಲಸ ಮಾಡ್ತಾರೆ. ಈ ನೈಟ್ ಕರ್ಪ್ಯೂನಿಂದ ಆಟೋ ಚಾಲಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ರಾತ್ರಿ ಸಮಯದಲ್ಲಿ ನಗರಕ್ಕೆ ಬರೊ ಗ್ರಾಹಕರ ಗತಿ ಏನು? ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಎಂಬಂತೆ ವರ್ತಿಸ್ತಿದೆ. ನೈಟ್ ಬಸ್ಸುಗಳ ಓಡಾಟಕ್ಕೆ ಅವಕಾಶ ನೀಡಿದ್ದೀರಾ.
 
ಹಾಗೇ ಆಟೋ ಮತ್ತು ಟ್ಯಾಕ್ಸಿಗಳಿಗೂ ಓಡಾಡಲು ಅವಕಾಶ ಮಾಡಿಕೊಡಬೇಕು. ಈ ಹಿಂದಿನ ಕೊರೊನಾ ಹೊಡೆತಕ್ಕೆ ಆಟೋ ಚಾಲಕರು ನಲುಗಿ ಹೋಗಿದ್ದಾರೆ. ಈಗಷ್ಟೇ ಚೇತರಿಕೆ ಕಾಣುತ್ತಿರುವ ಈ ಸಂದರ್ಭಗಳಲ್ಲಿ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಹೀಗಾಗಿ ರಾತ್ರಿ ವೇಳೆ ಆಟೋ ಮತ್ತು ಟ್ಯಾಕ್ಸಿ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಆದರ್ಶ ಆಟೋ ಹಾಗೂ ಟ್ಯಾಕ್ಸಿ ಮಾಲೀಕರ ಸಂಘ ಅಧ್ಯಕ್ಷ ಮಂಜುನಾಥ್ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments