Webdunia - Bharat's app for daily news and videos

Install App

ಕರಾವಳಿಯಲ್ಲಿ ರಾತ್ರಿಯೆಲ್ಲಾ ಭಯಹುಟ್ಟಿಸುವ ಮಳೆ ಇನ್ನೆಷ್ಟು ದಿನ

Krishnaveni K
ಶುಕ್ರವಾರ, 2 ಆಗಸ್ಟ್ 2024 (10:43 IST)
ಬೆಂಗಳೂರು: ಕರಾವಳಿಯಲ್ಲಿ ರಾತ್ರಿಯೆಲ್ಲಾ ಭಾರೀ ಮಳೆಯಾಗಿದ್ದು, ಇಂದು ಬೆಳಿಗ್ಗೆಯೂ ಮೋಡ ಕವಿದು ಧಾರಾಕಾರವಾಗಿ ಮಳೆ ಸುರಿಯುತ್ತಿದೆ.ಇನ್ನೂ ಮೂರು ದಿನ ಮಳೆ ಮುಂದುವರಿಯಬಹುದು ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಸೇರಿದಂತೆ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೆ ಬೆಂಗಳೂರು ಗ್ರಾಮಾಂತರ, ನಗರ, ಬೀದರ್, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ರಾಮಗರನ, ವಿಜಯಪುರ, ಯಾದಗಿರಿ ಮುಂತಾದೆಡೆ ಇಂದು ಮಳೆಯಾಗುವ ಸಾಧ್ಯತೆಯಿದೆ.

ಕೇರಳದ ವಯನಾಡಿನಲ್ಲಿ ಇತ್ತೀಚೆಗೆ ರಾತ್ರಿ ಮಳೆ ಜೊತೆಗೆ ಗುಡ್ಡ ಕುಸಿತದಿಂದಾಗಿ ಅನಾಹುತವೇ ಸಂಭವಿಸಿತ್ತು. ಇದೀಗ ಕರಾವಳಿಯಲ್ಲೂ ರಾತ್ರಿ ಮಳೆ ಎಂದರೆ ಜನರು ಭಯಪಡುವಂತಾಗಿದೆ. ಭಾರೀ ಮಳೆಯಿಂದಾಗಿ ಈಗಾಗಲೇ ನದಿಗಳು ಅಪಾಯ ಮಟ್ಟಮೀರಿ ಹರಿಯುತ್ತಿದೆ. ಹೀಗಾಗಿ ಜನ ಭಯದಲ್ಲೇ ಕಾಲ ಕಳೆಯುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಮಾಡಿದ್ದ ಈ ಒಂದು ದರ್ಪದ ವರ್ತನೆಯೇ ಅವರು ಸಿಕ್ಕಿಹಾಕುವಂತೆ ಮಾಡಿತು

ಮೇಘಾಲಯ ಹನಿಮೂನ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಇಲ್ಲಿದೆ ಡೀಟೈಲ್ಸ್

ಪ್ರಜ್ವಲ್ ರೇವಣ್ಣ ಶಿಕ್ಷೆ ಪ್ರಕಟ ವೇಳೆ ತಂದೆ ಎಚ್ ಡಿ ರೇವಣ್ಣ, ಭವಾನಿ ಎಲ್ಲಿದ್ದಾರೆ

ಧರ್ಮಸ್ಥಳ ಕೇಸ್: 9 ನೇ ಪಾಯಿಂಟ್ ನಲ್ಲಿ ಹೂತ ಬಾಲಕಿ ಬಗ್ಗೆ ದೂರುದಾರನ ವಿವರಣೆ ಹೇಗಿತ್ತು

ಮುಂದಿನ ಸುದ್ದಿ
Show comments