ಮಂಡ್ಯ ಅಖಾಡಕ್ಕೆ ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ಎಂಟ್ರಿ

Webdunia
ಗುರುವಾರ, 26 ಏಪ್ರಿಲ್ 2018 (18:42 IST)
ಖ್ಯಾತ ಚಿತ್ರನಟ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಮಳವಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ರೋಡ್ ಷೋ ನಡೆಸಿದ್ರು.
 ಜೆಡಿಎಸ್ ಅಭ್ಯರ್ಥಿ ಡಾ. ಕೆ.ಅನ್ನದಾನಿ ಪರ ಮತಯಾಚನೆ ಮಾಡಿದ್ರು. ನಿಖಿಲ್ ಕುಮಾರ್ ಆಗಮಿಸುತ್ತಿದ್ದಂತೆ ಅವರನ್ನು ನೋಡಲು ಅಭಿಮಾನಿಗಳ ದಂಡೇ ಹರಿದು ಬಂದಿತ್ತು. 
 
ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಹಲಗೂರು-ಚನ್ನಪಟ್ಟಣ ರಸ್ತೆ, ಮುತ್ತತ್ತಿ ರಸ್ತೆ, ಹಾಡ್ಲಿ, ಡಣನಾಯಕನಪುರ, ಮಳವಳ್ಳಿ ಪಟ್ಟಣ, ಕಿರಗಾವಲು ಹೋಬಳಿಗಳ ವಿವಿಧ ಗ್ರಾಮಗಳು ಸೇರಿದಂತೆ ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆ.ಎಂ.ದೊಡ್ಡಿ, ದೊಡ್ಡರಸಿನಕೆರೆ, ಮದ್ದೂರು ಪಟ್ಟಣ ಹತ್ತು ಹಲವು ಗ್ರಾಮಗಳಲ್ಲಿ ನಿಖಿಲ್ ರೋಡ್ ಷೋ ನಡೆಸಿದ್ರು.
 
 ನಿಖಿಲ್ ಸಾಗುವ ಮಾರ್ಗದುದ್ದಕ್ಕೂ ಸಾವಿರಾರು ಜೆಡಿಎಸ್ ಕಾರ್ಯಕರ್ತರು ಹಾಗೂ ನಿಖಿಲ್ ಅಭಿಮಾನಿಗಳು ಬೈಕ್ ರ್ಯಾಲಿ ನಡೆಸಿದ್ರು. ರೋಡ್ ಶೋ ಸಂದರ್ಭ ಮಾತನಾಡಿದ ನಿಖಿಲ್ ಕುಮಾರ್ ಎರಡು ರಾಷ್ಟ್ರೀಯ ಪಕ್ಷಗಳಿಗೂ ಅಧಿಕಾರ ನೀಡಿದ್ದೀರಿ. 
 
ಬಿಜೆಪಿಯವ್ರು ಸದನದಲ್ಲಿ ನೀಲಿ ಚಿತ್ರ ನೋಡಿದ್ರೆ, ಕಾಂಗ್ರೆಸ್ ನವ್ರು ಸುಳ್ಳು ಭರವಸೆ ನೀಡಿ ಜನರನ್ನ ವಂಚಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದವರು ನಿಮ್ಮ ದುಡ್ಡನ್ನೇ ಕೊಳ್ಳೆ ಹೊಡೆದು ನಿಮಗೇ ಹಂಚುತ್ತಿದ್ದಾರೆ ಎಂದು ಆರೋಪಿಸಿದ್ರು. 
 
ಕಾಂಗ್ರೆಸ್ ಪಕ್ಷಕ್ಕೆ ರೈತರು, ಬಡವರ ಪರ ಕಾಳಜಿ ಇಲ್ಲ. ರೈತರ ಸಂಕಷ್ಟ ದೂರವಾಗಿಸಲು ಈ ಬಾರಿ ಜೆಡಿಎಸ್ ಬೆಂಬಲಿಸಿ ಎಂದು ಕರೆ ನೀಡಿದ ಅವ್ರು, ಮಳವಳ್ಳಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಡಾ.ಕೆ. ಅನ್ನದಾನಿ ಅವ್ರನ್ನ ಗೆಲ್ಲಿಸುವುದರ ಮೂಲಕ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ಮನವಿ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments