ಬೆಂಗಳೂರು: ಈ ಹಿಂದೆ ಚುನಾವಣೆ ಸಂದರ್ಭಗಳಲ್ಲಿ ಕುಮಾರಸ್ವಾಮಿ ಕಣ್ಣೀರು ಹಾಕ್ತಾರೆ ಎಂದು ವ್ಯಂಗ್ಯ ಮಾಡುತ್ತಿದ್ದರು ಡಿಕೆ ಶಿವಕುಮಾರ್. ಇದೀಗ ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಪ್ರತಿಕ್ರಿಯಿಸುವಾಗ ಡಿಕೆಶಿಯೇ ಕಣ್ಣೀರು ಹಾಕಿದ್ದಾರೆ. ಇದಕ್ಕೆ ನಿಖಿಲ್ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.
ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವಾಗ ಪಾಪ ಮಕ್ಕಳನ್ನು ನೋಡಕ್ಕಾಗಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಗಳ ಗಳನೆ ಅತ್ತಿದ್ದರು. ಅವರ ಅಳುವನ್ನು ಈಗ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ.
ಡಿಕೆ ಶಿವಕುಮಾರ್ ಅವರಿಗೂ ಅಳು ಬರುತ್ತಾ? ನನಗೆ ಹಾಗನಿಸಲ್ಲಪ್ಪ ಎಂದು ವ್ಯಂಗ್ಯ ಮಾಡಿದ್ದಾರೆ. ಕ್ರಿಕೆಟಿಗರ ಜೊತೆ ರೀಲ್ಸ್, ಸೆಲ್ಫೀ ತೆಗೆಸಿಕೊಂಡಿದ್ದಾರೆ. ಆರ್ ಸಿಬಿ ಅಭಿಮಾನಿಗಳು ಸಾಯುತ್ತಿದ್ದರೆ ಕ್ರಿಕೆಟಿಗರರ ಜೊತೆ ಕಪ್ ಎತ್ತಿಕೊಂಡು, ಕಪ್ ಗೆ ಮುತ್ತಿಕ್ಕಿ ಸಂಭ್ರಮಿಸುತ್ತಿದ್ದರು. ಅವರಿಗೆ ನಾಚಿಕೆಯಾಗಲ್ವಾ ಎಂದು ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಹಿಂದೆ ಚನ್ನರಾಯಪಟ್ಟಣ ವಿಧಾನಸಭೆ ಚುನಾವಣೆ ಪ್ರಚಾರ ವೇಳೆ ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದ್ದರು. ಇದಕ್ಕೆ ಮೊದಲು ಕುಮಾರಸ್ವಾಮಿ ಕಣ್ಣೀರು ಹಾಕಿದಾಗಲೆಲ್ಲಾ ಡಿಕೆ ಶಿವಕುಮಾರ್ ವ್ಯಂಗ್ಯ ಮಾಡಿದ್ದರು. ಇದೀಗ ನಿಖಿಲ್ ಕುಮಾರಸ್ವಾಮಿ ಈ ರೀತಿ ತಿರುಗೇಟು ಕೊಟ್ಟಿದ್ದಾರೆ.