Webdunia - Bharat's app for daily news and videos

Install App

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

Krishnaveni K
ಬುಧವಾರ, 9 ಜುಲೈ 2025 (17:54 IST)
ಬೆಂಗಳೂರು: ದೇಶಕ್ಕೆ ಮೋದಿ ಪ್ರಧಾನಿಯಾಗಬೇಕು, ರಾಜ್ಯಕ್ಕೆ ಮತ್ತೊಮ್ಮೆ ಕುಮಾರಸ್ವಾಮಿಯವರು ಸಿಎಂ ಆಗಬೇಕು ಎಂಬುದೇ ನನ್ನ ಆಸೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಜೆಡಿಎಸ್ ಕಾರ್ಯಕರ್ತರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗಬೇಕು ಎಂದು ಬಯಕೆ ವ್ಯಕ್ತಪಡಿಸಿದ್ದಾರೆ. ಇದು ಜನರ ಭಾವನೆ ಎಂದಿದ್ದಾರೆ.

ಕುಮಾರಸ್ವಾಮಿ ಮತ್ತೆ ಸಿಎಂ ಆಗಬೇಕು ಎಂಬುದು ಕೇವಲ ನನ್ನ ಆಸೆಯಲ್ಲ. ಇದು ಜನರ ಭಾವನೆಯಾಗಿದೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅನೇಕ ಕೊಡುಗೆಗಳನ್ನು ನೀಡಿದ್ದನ್ನು ಜನ ಈಗಲೂ ಸ್ಮರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಅವರೇ ಮತ್ತೊಮ್ಮೆ ಸಿಎಂ ಆಗಬೇಕು ಎಂಬ ಭಾವನೆ ಜನರಲ್ಲೂ ಇದೆ ಎಂದಿದ್ದಾರೆ.

ಕುಮಾರಸ್ವಾಮಿ ಸಿಎಂ ಆದರೆ ರಾಜ್ಯದಲ್ಲಿ ಸಮೃದ್ಧಿಯ ವಾತಾವರಣ ನಿರ್ಮಾಣವಾಗಲಿದೆ. ರಾಜ್ಯ ಪ್ರವಾಸ ಮಾಡುವಾಗ ಜನರ ಭಾವನೆಗಳನ್ನು ಅರಿತಿದ್ದೇನೆ. ಬಿಜೆಪಿ-ಜೆಡಿಎಸ್ ಮೈತ್ರಿ ಶಾಶ್ವತವಾಗಿರಲಿದೆ. ಇದು ಮುಂಬರುವ ವಿಧಾನಸಭೆ ಚುನಾವಣೆಯಲ್ಲೂ ಇರಲಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಒಟ್ಟಾಗಿ ಸರ್ಕಾರ ರಚನೆ ಮಾಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ವರ್ಷದಲ್ಲಿ ಬರೋಬ್ಬರಿ 52 ಕೋಟಿ ಸಸಿ ನೆಡುವ ನಿರ್ಧಾರ ಕೈಗೊಂಡ ಯೋಗಿ ಸರ್ಕಾರ

ದೆಹಲಿಯಲ್ಲಿ ಒಂದೇ ಕಾರಿನಲ್ಲಿ ಸಿಎಂ, ಡಿಸಿಎಂ ಸುತ್ತಾಟ

ಆ್ಯಪಲ್ ಕಂಪನಿಯ ಸಿಒಒ ಆಗಿ ಭಾರತ ಮೂಲದ ಸಬಿಹ್ ಖಾನ್ ನೇಮಕ

ದೇಶದಲ್ಲಿ ನಿರುದ್ಯೋಗ ಪ್ರಮಾಣ ಆತಂಕಕಾರೀ ಮಟ್ಟಕ್ಕೆ ತಲುಪಿದೆ: ರಣದೀಪ್ ಸುರ್ಜೇವಾಲ

ಗುಜರಾತ್ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳೆಷ್ಟು, ಬದುಕ್ಕಿದ್ದವರೆಷ್ಟು

ಮುಂದಿನ ಸುದ್ದಿ
Show comments