Select Your Language

Notifications

webdunia
webdunia
webdunia
webdunia

ಕೆಸರು ಗದ್ದೆಯಲ್ಲಿ ನಾಟಿ ಮಾಡಿದ ನಿಖಿಲ್ ಕುಮಾರಸ್ವಾಮಿ

ಕೆಸರು ಗದ್ದೆಯಲ್ಲಿ ನಾಟಿ ಮಾಡಿದ ನಿಖಿಲ್ ಕುಮಾರಸ್ವಾಮಿ
ಮಂಡ್ಯ , ಶನಿವಾರ, 30 ಮಾರ್ಚ್ 2019 (13:46 IST)
ಮಂಡ್ಯ : ಸಿಎಂ ಕುಮಾರಸ್ವಾಮಿ ಬಳಿಕ ಇದೀಗ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ  ಗದ್ದೆಗಿಳಿದು ನಾಟಿ ಮಾಡಿ ತಾನೂ ಕೂಡ ರೈತರ ಮಗ ಎಂದು ಸಾಬೀತು ಮಾಡಿದ್ದಾರೆ.


ಮೈತ್ರಿ ಸರ್ಕಾರದ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕೀಳಿಯುತ್ತಿರುವ ನಿಖಿಲ್ ಕುಮಾರಸ್ವಾಮಿ ಮದ್ದೂರು ಭಾಗದಲ್ಲಿ ಇಂದು ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಪ್ರಚಾರ ಮಾಡುತ್ತಿದ್ದ ಪಕ್ಕದ ಗದ್ದೆಯಲ್ಲಿ ರೈತರು ಗದ್ದೆ ನಾಟಿ ಮಾಡುತ್ತಿದ್ದರು. ಇದನ್ನು ಗಮನಿಸಿದ ನಿಖಿಲ್ ತಾವೂ ಅವರೊಂದಿಗೆ ಸೇರಿ ನಾಟಿ ಮಾಡಿದ್ದಾರೆ.


ಜೊತೆಗೆ ಅಲ್ಲಿ ನಾಟಿ ಮಾಡುತ್ತಿದ್ದ ರೈತರ ಜೊತೆ ಮಾತನಾಡಿ ನಿಮ್ಮ ಕಷ್ಟಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ. ಒಟ್ಟಿನಲ್ಲಿ ಮಂಡ್ಯದಲ್ಲಿ ಚುನಾವಣೆಯಲ್ಲಿ ಹೇಗಾದ್ರೂ ಮಾಡಿ ಗೆಲ್ಲಬೇಕೆಂಬ ಪಣ ತೊಟ್ಟಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯ ಭದ್ರಕೋಟೆ ಅಪರೇಷನ್ ಹಸ್ತ ನಡೆಸಿ ಯಶಸ್ವಿಯಾದ ಯು.ಟಿ ಖಾದರ್