ಕ್ಷೇತ್ರ ಬದಲಿಸಿದ ನಿಖಿಲ್ ಕುಮಾರಸ್ವಾಮಿ?

Webdunia
ಶನಿವಾರ, 2 ಮಾರ್ಚ್ 2019 (17:55 IST)
ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿರುವಂತೆ ಸಂಭಾವ್ಯ ಅಭ್ಯರ್ಥಿಗಳ ಲೆಕ್ಕಾಚಾರ ತಲೆಕೆಳಗೆ, ಮೇಲೆ ಆಗುತ್ತಿದೆ. ಸುಮಲತಾ ಸ್ಪರ್ಧೆ ಖಚಿತವಾಗಿರುವ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಕ್ಷೇತ್ರ ಬದಲಿಸಲಿದ್ದಾರೆ ಎನ್ನುವ ಚರ್ಚೆ ಶುರುವಾಗಿದೆ.

ಸುಮಲತಾ ಅಂಬರೀಶ್ ಮಂಡ್ಯದಲ್ಲಿ ಸ್ಪರ್ಧಿಸುವುದು ಖಚಿತವಾದ ಹಿನ್ನಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಮಂಡ್ಯ ಬಿಟ್ಟು ಮೈಸೂರಿನಿಂದ ಕಣಕ್ಕಿಳಿಸಲು ಚಿಂತನೆಗಳು ನಡೆಯುತ್ತಿವೆ.

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಮೈತ್ರಿಯಾಗಲಿದ್ದು, ಹಾಸನ, ಮಂಡ್ಯ ಮೈಸೂರು ಸೇರಿದಂತೆ ಹಲವು ಕ್ಷೇತ್ರಗಳನ್ನು ಬಿಟ್ಟು ಕೊಡಲು ಪಟ್ಟು ಹಿಡಿದಿದೆ. ಬಹುತೇಕ ಮೈಸೂರು ಕ್ಷೇತ್ರ ಜೆಡಿಎಸ್ ಪಾಲಾಗುವ ನಿರೀಕ್ಷೆ ಇದೆ. ಇತ್ತ ಮಂಡ್ಯದಲ್ಲಿ ಸುಮಲತಾ ಅವರು ಕಣಕ್ಕೆ ಇಳಿಯುತ್ತಿರುವುದರಿಂದ ಕೇತ್ರದಲ್ಲಿ ಜೆಡಿಎಸ್ಗೆ ಹಿನ್ನಡೆಯಾಗುವ ಆತಂಕ ಎದುರಾಗಿದೆ ಎನ್ನಲಾಗಿದೆ.

ಸಚಿವ ಜಿ.ಟಿ. ದೇವೇಗೌಡ ಮಾತನಾಡಿದ್ದು, ಮೈಸೂರಿನಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಬೇಕು. ಅವರು ಸ್ಪರ್ಧಿಸಿದಲ್ಲಿ ಗೆಲ್ಲಿಸುವ ಜವಾಬ್ದಾರಿ ನಮ್ಮದು ಎಂದಿದ್ದಾರೆ. ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯಲು ನಿಖಿಲ್ ಕುಮಾರಸ್ವಾಮಿ ಬಯಸಿದ್ದಾರೆ. ಅಲ್ಲದೇ ಮೈಸೂರಿನಿಂದ ಸ್ಪರ್ಧಿಸುವಂತೆ ಪಕ್ಷದ ವರಿಷ್ಠ ದೇವೇಗೌಡರಿಗೆ ಒತ್ತಾಯಪಡಿಸಲಾಗಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಮುಂದಿನ ಸುದ್ದಿ
Show comments