Webdunia - Bharat's app for daily news and videos

Install App

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Krishnaveni K
ಶನಿವಾರ, 14 ಜೂನ್ 2025 (15:55 IST)
ಬೆಂಗಳೂರು: ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಸಿದ್ದರಾಮಯ್ಯನವರೇ ದೆಹಲಿಗೆ ಹೋಗಿ ಪ್ರಧಾನ ಮಂತ್ರಿಗಳ ಬಳಿ ಮಾತನಾಡಲಿ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ರಾಜ್ಯಕ್ಕೆ ಅನುದಾನ ಕೊರತೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರದ ಮೇಲೆ ಪದೇ ಪದೇ ಆಕ್ರೋಶ ವ್ಯಕ್ತಪಡಿಸುತ್ತಾರೆ. ಹೀಗಾಗಿ ನಿಖಿಲ್ ಕುಮಾರಸ್ವಾಮಿ ಈ ರೀತಿ ತಿರುಗೇಟು ಕೊಟ್ಟಿದ್ದಾರೆ. ಜನತೆ ಪರವಾಗಿ ಮುಖ್ಯಮಂತ್ರಿಗಳೇ ಮಾತನಾಡಲಿ ಎಂದಿದ್ದಾರೆ.

ಕೇಂದ್ರ ಹಣಕಾಸು ಆಯೋಗದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ಬಾರಿ ಭಾಗಿಯಾಗಿದ್ದರು. ಬಳಿಕ ರಾಜ್ಯಕ್ಕೆ ಅನುದಾನ ಕೊಡುವಂತೆ ಮನವಿ ಸಲ್ಲಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು ರಾಜ್ಯಕ್ಕೆ ಅನುದಾನ ಸಾಕಾಗುತ್ತಿಲ್ಲ ಎಂದಿದ್ದರು.

ಇದಕ್ಕೀಗ ನಿಖಿಲ್ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ‘ಈ ಬಾರಿಯಾದರೂ ಸಿಎಂ ಹಣಕಾಸು ಆಯೋಗದ ಸಭೆಗೆ ಹಾಜರಾಗಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಇಷ್ಟು ದಿನ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಲಿಲ್ಲ. ಅನುದಾನ ಕೊರತೆಯಾಗಿದ್ದರೆ ರಾಜ್ಯದ ಜನತೆ ಪರವಾಗಿ ಪ್ರಧಾನಿಗಳನ್ನು ಭೇಟಿ ಮಾಡಿ ಚರ್ಚೆ ಮಾಡಬೇಕು. ಕುಮಾರಸ್ವಾಮಿ ಕೂಡಾ ಸಿಎಂ ಜೊತೆ ನಿಂತು ಅನುದಾನ ಕೊಡಿಸುತ್ತಾರೆ. ಅದು ಬಿಟ್ಟು ಬಹಿರಂಗವಾಗಿ ಹೇಳಿಕೆ ಕೊಡುತ್ತಿದ್ದರೆ ಪ್ರಯೋಜನವಿಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments