Webdunia - Bharat's app for daily news and videos

Install App

ಕುಮಾರಸ್ವಾಮಿ ಕಣ್ಣೀರು ಹಾಕಿರುವುದು ಜನರಿಗಾಗಿ: ನಿಖಿಲ್ ಕುಮಾರಸ್ವಾಮಿ ತಿರುಗೇಟು

Krishnaveni K
ಶನಿವಾರ, 30 ಮಾರ್ಚ್ 2024 (14:42 IST)
Photo Courtesy: Nikhil Kumaraswamy X
ಬೆಂಗಳೂರು: ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆದಿರುವುದೇ ಅನುಮಾನ ಎಂದಿದ್ದ ಶಾಸಕ ರಮೇಶ್ ಬಂಡಿಸಿದ್ದೇಗೌಡಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿಗೆ ಚುನಾವಣೆ ಹತ್ತಿರ ಬಂದಾಗ ಅನಾರೋಗ್ಯವಾಗುತ್ತದೆ. ಶಾಸಕ ಚೆಲುವರಾಯ ಸ್ವಾಮಿಗೂ ಇದೇ ಖಾಯಿಲೆಯಿದೆ. ಆದರೆ ಅವರು ಚಿಕಿತ್ಸೆಗೆ ಹೋದರೆ ಒಂದು ತಿಂಗಳು ಸಮಯ ಬೇಕಾಗುತ್ತದೆ. ಆದರೆ ಕುಮಾರಸ್ವಾಮಿ ಎರಡೇ ದಿನದಲ್ಲಿ ಹೇಗೆ ಬರುತ್ತಾರೆ ಎಂದು ಶಾಸಕ ಬಂಡಿಸಿದ್ದೇಗೌಡ ಅನುಮಾನ ವ್ಯಕ್ತಪಡಿಸಿದ್ದರು.

ಇದಕ್ಕೀಗ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ‘ಇಂತಹ ಹೇಳಿಕೆ ನೀಡುವುದು ಅವರ ಹಿರಿತನಕ್ಕೆ ಶೋಭೆ ತರುವುದಿಲ್ಲ. ನಮ್ಮ ತಂದೆಗೆ ಮೂರನೇ ಬಾರಿ ವಾಲ್ ರಿಪ್ಲೇಸ್ ಮೆಂಟ್ ಮಾಡಿರುವುದು ನಿಜ. ಅದನ್ನು ನಾವು ಯಾರಿಗೂ ಪ್ರೂವ್ ಮಾಡಬೇಕಾಗಿಲ್ಲ’ ಎಂದಿದ್ದಾರೆ.

‘ನಾವು ಸುಮ್ಮ ಸುಮ್ಮನೇ ಕಣ‍್ಣೀರು ಹಾಕಿ ಅನುಕಂಪ ಗಿಟ್ಟಿಸಿಕೊಂಡು ಮತ ಕೇಳಬೇಕಾಗಿಲ್ಲ. ನಾವು ಕಣ‍್ಣೀರು ಹಾಕಿದ್ದರೆ ಅದು ರಾಜ್ಯದ ಜನರಿಗಾಗಿ ಅಷ್ಟೇ ಹೊರತು ನಮ್ಮ ವೈಯಕ್ತಿಕ ಲಾಭಕ್ಕೆ ಕಣ್ಣೀರು ಹಾಕಿಲ್ಲ. ಕಳೆದ 6 ವರ್ಷಗಳಲ್ಲಿ ಮೂರನೇ ಬಾರಿಗೆ ಅವರಿಗೆ ಹೃದಯ ಶಸ್ತ್ರಚಿಕಿತ್ಸೆಯಾಗಿರುವುದು. ಕುಮಾರಣ್ಣ ಎಲ್ಲೇ ನಿಂತರೂ ಜನ ಬೆಂಬಲಿಸುತ್ತಾರೆ. ಮಂಡ್ಯದಲ್ಲಿ ಚುನಾವಣೆಗೆ ನಿಲ್ಲಬೇಕೆಂಬುದು ಜನರ ಆಶಯವಾಗಿತ್ತು. ಅದರಂತೆ ಇಲ್ಲಿ ಚುನಾವಣೆಗೆ ನಿಂತಿದ್ದಾರೆ. ಸುಮಲತಾ ಬಳಿ ಹೋಗಿ ಬೆಂಬಲ ಕೇಳುತ್ತೇವೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಧರ್ಮಸ್ಥಳದಲ್ಲಿ ಇಂದು ಎಸ್ಐಟಿ ಕಾರ್ಯಾಚರಣೆ ಹೇಗಿರಲಿದೆ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ರಾಹುಲ್ ಗಾಂಧಿ ಮತಕಳ್ಳತನದ ಪ್ರತಿಭಟನೆ ಯಾವಾಗ ಡಿಕೆ ಶಿವಕುಮಾರ್ ಹೇಳಿದ್ದೇನು

ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments