ನಾನ್ ವೆಜ್ ಮಾಡಿಲ್ಲ ಅಂತ ಕಿರಿಕ್ ಮಾಡ್ತಿದ್ದ: ಅತುಲ್ ಸುಭಾಷ್ ಬಗ್ಗೆ ನಿಖಿತಾ ಹೇಳಿದ್ದೇನು

Krishnaveni K
ಬುಧವಾರ, 18 ಡಿಸೆಂಬರ್ 2024 (15:40 IST)
ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಟೆಕಿ ಅತುಲ್ ಸುಭಾಷ್ ಬಗ್ಗೆ ಆತನ ಬಂಧಿತ ಪತ್ನಿ ನಿಖಿತಾ ಸಿಂಘಾನಿಯಾ ಕೆಲವೊಂದು ಸ್ಪೋಟಕ ವಿಚಾರಗಳನ್ನು ಹೇಳಿದ್ದಾಳೆ.

ಅತುಲ್ ಸುಭಾಷ್ ತನ್ನ ಪತ್ನಿ ಮನೆಯವರ ಕಿರುಕುಳಕ್ಕೆ ಬೇಸತ್ತು ವಿಡಿಯೋ ಮಾಡಿ ಬೆಂಗಳೂರಿನ ಫ್ಲ್ಯಾಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಪತ್ನಿ ಮಹಿಳೆಯರ ಪರ ಇರುವ ಕಾರಣ ನೀಡಿ ತನಗೆ ಹಿಂಸೆ ನೀಡುತ್ತಿದ್ದಾಳೆ, ಮಗನ ಮುಖವನ್ನೂ ನೋಡಲು ಬಿಡುತ್ತಿಲ್ಲ ಎಂದು ಆಪಾದಿಸಿದ್ದ.

ಅದರ ಅನ್ವಯ ಪೊಲೀಸರು ನಿಖಿತಾ ಮತ್ತು ಆಕೆಯ ತಾಯಿ, ಸಹೋದರನನ್ನು ಬಂಧಿಸಿ ಬೆಂಗಳೂರಿಗೆ ಕರೆ ತಂದಿದ್ದರು. ಇದೀಗ ಪೊಲೀಸರು ನಿಖಿತಾಳನ್ನು ವಿಚಾರಣೆಗೊಳಪಡಿಸಿದ್ದು, ಈ ವೇಳೆ ನಿಜವಾದ ಸಂತ್ರಸ್ತೆ ನಾನು, ಅತುಲ್ ಅಲ್ಲ ಎಂದಿದ್ದಾಳೆ.

ನಾನಾಗಿಯೇ ಅತುಲ್ ಮನೆ ಬಿಟ್ಟು ಹೋಗಿರಲಿಲ್ಲ. ಆತನೇ ಕಿರುಕುಳ ನೀಡಿ ನಾನು ಹೋಗುವಂತೆ ಮಾಡಿದ್ದ. ಪ್ರತಿಯೊಂದು ವಿಚಾರಕ್ಕೂ ಕಿರಿಕ್ ತೆಗೆಯುತ್ತಿದ್ದ. ಅಡುಗೆ ಚೆನ್ನಾಗಿಲ್ಲ ಎಂದರೆ ಕಿರಕುಳ ನೀಡುತ್ತಿದ್ದ. ನಾನ್ ವೆಜ್ ಮಾಡದಿದ್ದರೂ ಮಾಡಿ ಎಂದು ಒತ್ತಾಯಿಸುತ್ತಿದ್ದ. ಆದರೂ ನಾನು ಮನೆ ಬಿಟ್ಟು ಹೋಗಿರಲಿಲ್ಲ.

ಆದರೆ ಅತುಲ್ ನಾನಾಗಿಯೇ ಮನೆ ಬಿಟ್ಟು ಹೋಗುವಂತೆ ಮಾಡಿ. ನಾವು ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದೆವು. ಆತನ ಸಾವಿಗೂ ನನಗೂ ಸಂಬಂಧವಿಲ್ಲ. ನಿಜವಾದ ಸಂತ್ರಸ್ತೆ ನಾನು. ಆದರೆ ನನ್ನನ್ನು ಯಾಕೆ ಅರೆಸ್ಟ್ ಮಾಡಿದ್ದೀರಿ ಎಂದು ನಿಖಿತಾ ಪೊಲೀಸರ ಮುಂದೆ ಗೋಳು ತೋಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments