Webdunia - Bharat's app for daily news and videos

Install App

Nipah Virus: ಕೇರಳವನ್ನು ನಲುಗಿಸಿದ ಈ ಖಾಯಿಲೆ ಬೆಂಗಳೂರಿಗೂ ಕಾಲಿಡುತ್ತಂತೆ

Krishnaveni K
ಬುಧವಾರ, 24 ಜುಲೈ 2024 (09:40 IST)
ಬೆಂಗಳೂರು: ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ ಇದೀಗ ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಕಾಲಿಡುವ ಭೀತಿ ಎದುರಾಗಿದೆ. ಈಗಾಗಲೇ ಡೆಂಗ್ಯೂ ಪ್ರಕರಣಗಳಿಂದ ದಾಖಲೆ ಮಾಡಿರುವ ಬೆಂಗಳೂರಿಗೆ ನಿಫಾ ವೈರಸ್ ಭೀತಿ ಎದುರಾಗಿದೆ.

ಬಾವಲಿಯ ಜೊಲ್ಲು ರಸದಿಂದ ಹರಡುವ ಮಾರಣಾಂತಿಕ ರೋಗ ನಿಫಾ ವೈರಸ್. ಈ ವೈರಸ್ ಗೆ ಈಗಾಗಲೇ ಕೇರಳದಲ್ಲಿ ಸಾವು-ನೋವುಗಳಾಗಿವೆ. ಇನ್ನೂ ಇದಕ್ಕೆ ಸರಿಯಾದ ಚಿಕಿತ್ಸೆ ಪತ್ತೆ ಮಾಡಲಾಗಿಲ್ಲ. ಇದೀಗ ಕೇರಳದಾದ್ಯಂತ ನಿಫಾ ವೈರಸ್ ಭೀತಿಯಿದೆ. ಅದರ ನಡುವೆ ಈಗ ಬೆಂಗಳೂರಿಗೂ ನಿಫಾ ವೈರಸ್ ಭೀತಿ ಕಾಡಿದೆ.

ಮನುಷ್ಯರಿಗೆ ಈ ಸೋಂಕು ತಗುಲಿದರೆ ಇನ್ನೊಬ್ಬರಿಗೆ ಹರಡುತ್ತದೆ. ಇದು ತೀವ್ರವವಾದರೆ ಸಾವೇ ಗತಿ. ಹೀಗಾಗಿ ಕೇರಳದ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಿಂದ ಅನೇಕರು ಬೆಂಗಳೂರಿಗೆ ಬರುತ್ತಾರೆ. ಹೀಗಾಗಿ ಇಲ್ಲಿ ನಿಫಾ ವೈರಸ್ ಹರಡುವ ಭೀತಿಯಿದೆ. ತೀವ್ರ ಜ್ವರ, ತಲೆನೋವು, ವಾಂತಿ, ಮಾಂಸಖಂಡಗಳಲ್ಲಿ ನೋವು ಇತ್ಯಾದಿ ಇದರ ಲಕ್ಷಣಗಳು. ರೋಗ ಉಲ್ಬಣಗೊಂಡಂತೆ ಮಾನಸಿಕವಾಗಿ ಭ್ರಮೆಗೊಳಗಾಗುತ್ತೇವೆ. ಮೆದುಳಿನಲ್ಲಿ ಉರಿಯೂತ ಸಂಭವಿಸಬಹುದಾಗಿದೆ. ಬಳಿಕ ರೋಗಿಯು ಕೋಮಾ ಸ್ಥಿತಿಗೆ ಜಾರಬಹುದು. ಹೀಗಾಗಿ ಮನೆಗಳ ಬಳಿ ಸ್ವಚ್ಛತೆ ಕಾಪಾಡುವುದು, ಪ್ರಾಣಿಗಳು ಕೆರೆದ, ಗೀರಿದ ಗಾಯಗಳಿರುವ ಹಣ್ಣು, ತರಕಾರಿಗಳನ್ನು ಸೇವಿಸದೇ ಮುನ್ನೆಚ್ಚರಿಕೆ ವಹಿಸಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments