Webdunia - Bharat's app for daily news and videos

Install App

ನನ್ನ ಮಗಳ ಪ್ರಾಣ ತೆಗೆದವನ ಪ್ರಾಣ ತೆಗೆದುಕೊಳ್ಳದೇ ಬಿಡಲ್ಲ: ನಿರಂಜನ್ ಹಿರೇಮಠ್

Krishnaveni K
ಗುರುವಾರ, 25 ಏಪ್ರಿಲ್ 2024 (15:04 IST)
ಹುಬ್ಬಳ್ಳಿ: ಮಗಳು ನೇಹಾಳನ್ನು ಹತ್ಯೆ ಮಾಡಿದ ಫಯಾಜ್ ಬಗ್ಗೆ ಆಕ್ರೋಶ ವ್ಯಕಪಡಿಸಿರುವ ನಿರಂಜನ್ ಹಿರೇಮಠ್ ನನ್ನ ಪ್ರಾಣ ಹೋದರೂ ಆತನ ಪ್ರಾಣ ತೆಗೊಳ್ಳದೇ ಬಿಡಲ್ಲ ಎಂದಿದ್ದಾರೆ.

ನಿನ್ನೆಯಷ್ಟೇ ಸಿಐಡಿ ಆರೋಪಿ ಫಯಾಜ್ ನನ್ನು ವಶಕ್ಕೆ ಪಡೆದುಕೊಂಡು ಸ್ಥಳ ಮಹಜರು ನಡೆಸಿತ್ತು. ಸಿಐಡಿ ವಿಚಾರಣೆ ವೇಳೆ ಫಯಾಜ್ ತಾನು ಹತ್ಯೆಗಾಗಿ ನಡೆಸಿದ್ದ ಒಂದು ವಾರದ ಯೋಜನೆ ಬಗ್ಗೆ ಬಾಯ್ಬಿಟ್ಟಿದ್ದ. ಇದರ ಬಗ್ಗೆ ಈಗ ನಿರಂಜನ್ ಹಿರೇಮಠ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

‘ನನ್ನ ಮಗಳ ಶವದ ಮೇಲೆ ಶಪಥ ಮಾಡಿದ್ದೇನೆ. ನನ್ನ ಪ್ರಾಣ ಹೋದರೂ ಚಿಂತೆಯಿಲ್ಲ, ಫಯಾಜ್ ಪ್ರಾಣ ತೆಗೆದುಕೊಳ್ಳುತ್ತೇನೆ. ಫಯಾಜ್ ಮಾತ್ರವಲ್ಲ, ಆತನಿಗೆ ಯಾರೋ ಬೇರೆಯವರೂ ಸಹಾಯ ಮಾಡಿದ್ದಾರೆ. ಅವರನ್ನೂ ಬಂಧಿಸಬೇಕು’ ಎಂದು ನಿರಂಜನ್ ಹಿರೇಮಠ್ ಆಗ್ರಹಿಸಿದ್ದಾರೆ.

ಹಂತಕ ಫಯಾಜ್ ಮಗಳನ್ನು ಕಿಡ್ನ್ಯಾಪ್ ಮಾಡಲು ಯತ್ನಿಸಿದ್ದ. ಕೆಲವು ದಿನಗಳಿಂದ ನಮಗೆ ಬೆದರಿಕೆ ಇತ್ತು. ಯಾರೋ ನಮ್ಮ ಮನೆಗೆ ಬಂದು ವಿಡಿಯೋ ಮಾಡುತ್ತಿದ್ದರು. ಕೆಲವು ಅಪರಿಚಿತರು ಮನೆ ಸುತ್ತಮುತ್ತ ಓಡಾಡುತ್ತಿದ್ದಾರೆ. ಎಲ್ಲವನ್ನೂ ಸಿಐಡಿ ಗಮನಕ್ಕೆ ತಂದಿದ್ದೇನೆ ಎಂದು ನಿರಂಜನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments