Select Your Language

Notifications

webdunia
webdunia
webdunia
webdunia

ನಿರ್ಭಯಾ ಪ್ರಕರಣ: ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಹೈಕೋರ್ಟ್

ನಿರ್ಭಯಾ ಪ್ರಕರಣ: ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಹೈಕೋರ್ಟ್
ನವದೆಹಲಿ , ಬುಧವಾರ, 4 ಮಾರ್ಚ್ 2015 (15:40 IST)
ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಯ ಸಂದರ್ಶನವಿರುವ ಸಾಕ್ಷ್ಯಚಿತ್ರದ ಪ್ರಸಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಕೂಡ ಎತ್ತಿ ಹಿಡಿದಿದ್ದು, ಮಾಧ್ಯಮಗಳಲ್ಲಿ ಪ್ರಸಾರವಾಗದಂತೆ ಕೇಂದ್ರ ಗೃಹ ಇಲಾಖೆಗೆ ಸೂಚಿಸಿದೆ.
 
ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಆದೇಶ ಹೊರಡಿಸಿರುವ ನ್ಯಾಯಾಲಯ, ನಿರ್ಭಯಾ ಪ್ರಕರಣದ ಆರೋಪಿ ನೀಡಿರುವ ಸಂದರ್ಶನವಿರುವ ಸಾಕ್ಷ್ಯಚಿತ್ರವನ್ನು ಯಾವುದೇ ಮಾಧ್ಯಮಗಳೂ ಕೂಡ ಪ್ರಸಾರ ಮಾಡದಂತೆ ಎಚ್ಚರ ವಹಿಸಿ ಎಂದು ಗೃಹ ಇಲಾಖೆಗೆ ಸೂಚಿಸಿರುವ ಕೋರ್ಟ್, ಒಂದು ವೇಳೆ ಪ್ರಸಾರ ಮಾಡಿದಲ್ಲಿ ಅಂತಹ ಮಾಧ್ಯಮಗಳ ವಿರುದ್ಧ ಕೂಡಲೇ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಸೂಚಿಸಿದೆ. 
 
ಇನ್ನು ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸಕ್ಷ್ಯಚಿತ್ರವನ್ನು ಪ್ರಸಾರ ಮಾಡದಂತೆ ನಿಷೇಧ ಹೊರಡಿಸಿದ್ದರು. ಅಲ್ಲದೆ ಈ ಸಂಬಂಧ ನ್ಯಾಯಾಲಯ ಕೂಡ ಸೂಚನೆ ನೀಡಿರುವುದರಿಂದ ಇಂಟರ್‌ನೆಟ್‌ನಲ್ಲೂ ಕೂಡ ಪ್ರಸಾರವಾಗದಂತೆ ಕ್ರಕ್ಕೆ ಮುಂದಾಗಿದ್ದಾರೆ. 
 
ಪ್ರಕರಣ ಸಂಬಧ ಇತರೆ ದೇಶಗಳಿಗೆ ಮನವಿ ಮಾಡಿಕೊಂಡಿರುವ ರಾಜನಾಥ್, ನಿಮ್ಮಲ್ಲಿನ ಯಾವುದೇ ಮಾಧ್ಯಮಗಳಲ್ಲಿ ನಿರ್ಭಯಾ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಾಕ್ಷ್ಯಚಿತ್ರ ಪ್ರಸಾರವಾಗದಂತೆ ನಿಗವಹಿಸುವ ಮೂಲಕ ಸಹಕರಿಸಿ ಎಂದು ಇತರೆ ರಾಷ್ಟ್ರಗಳಿಗೂ ಮನವಿ ಮಾಡಿದ್ದಾರೆ ಎನ್ನಲಾಗಿದೆ. 
 
ಇನ್ನು ಪ್ರಕರಣದ ಆರೋಪಿಗಳಲ್ಲೋರ್ವ ಮುಖೇಶ್ ಸಿಂಗ್(ಬಸ್ ಚಾಲಕ) ಎಂಬಾತನನ್ನು ಇತ್ತೀಚೆಗೆ ದೃಶ್ಯ ಮಾಧ್ಯಮವಾದ ಬಿಬಿಸಿ ವಾಹಿನಿಯು ಜೈಲಿನಲ್ಲಿಯೇ ಸಂದರ್ಶನ ನಡೆಸಿತ್ತು. ಈ ವೇಳೆ ಆರೋಪಿ ಸಿಂಗ್, ಅತ್ಯಾಚಾರ ಎಸಗುವಾಗ ಅವಳು(ನಿರ್ಭಯಾ) ವಿರೋಧಿಸದೆ ಸಹಕರಿಸಿದ್ದಿದ್ದರೆ ಅವಳನ್ನು ಅಮಾನುಷವಾಗಿ ಹತ್ಯೆ ಮಾಡುತ್ತಿರಲಿಲ್ಲ. ಅಲ್ಲದೆ ಸಭ್ಯ ಮಹಿಳೆಯರು ರಾತ್ರಿ 9 ಗಂಟೆ ವೇಳೆಯಲ್ಲಿ ಅಲೆಯುವುದು ಸರಿಯಲ್ಲ. ಅತ್ಯಾಚಾರ ವಿಷಯದಲ್ಲಿ ಯುವತಿಗೂ ಕೂಡ ಯುವಕನಷ್ಟೇ ಜವಾಬ್ದಾರಿ ಇರುತ್ತದೆ. ಯುವತಿಯರಿಗೆ ಮನೆಗೆಲಸ ಮೀಸಲಾಗಿದೆ. ಆದರೆ ಅದನ್ನು ಬಿಟ್ಟು ಡಿಸ್ಕೋಗಳಲ್ಲಿ, ಬಾರ್‌ಗಳಲ್ಲಿ ಯುವಕರ ಜೊತೆ ಅಲೆಯುತ್ತಾರೆ. ಅಲ್ಲದೆ ಅಶ್ಲೀಲ ಉಡುಪುಗಳನ್ನು ಧರಿಸುವುದು ಸರಿಯಲ್ಲ ಎಂದು ಹೇಳಿಕೆ ನೀಡಿದ್ದ. 
 
ಈ ಸಂದರ್ಶನದ ತುಣುಕನ್ನು ಮಾರ್ಚ್ 8ನ್ನು ಅಂತಾರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಿಸಲಾಗುವ ಹಿನ್ನೆಲೆಯಲ್ಲಿ ಅಂದು ಪ್ರಸಾರ ಮಾಡುವುದಾಗಿ ತಿಳಿಸಿತ್ತು. ಆದರೆ ಇದಕ್ಕೆ ಕೇಂದ್ರ ಸರ್ಕಾರ ತಡೆಯೊಡ್ಡಿತ್ತು. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸದನದಲ್ಲಿ ತಕಾರವೆತ್ತಿದ್ದವು. 

Share this Story:

Follow Webdunia kannada