Webdunia - Bharat's app for daily news and videos

Install App

ಆಜಾದಿ ಕಾ ಅಮೃತ‌ ಸರೋವರ ಕಾಮಗಾರಿ ವೀಕ್ಷಣೆ ಮಾಡಿದ ನಿರ್ಮಲಾ ಸೀತಾರಾಮನ್

Webdunia
ಶನಿವಾರ, 1 ಅಕ್ಟೋಬರ್ 2022 (14:22 IST)
ಆಜಾದಿ ಕಾ ಅಮೃತ ಸರೋವರ ಯೋಜನೆ'ಯಡಿ ಕೆರೆಗಳ ಅಭಿವೃದ್ದಿ ಕಾಮಗಾರಿಗಳ ವೀಕ್ಷಣೆಗೆ ಕೋಲಾರಕ್ಕೆ ಬಂದಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಸಮಾಧಾನ.
 
ಕೋಲಾರ ಜಿಲ್ಲಾದ್ಯಂತ ಆಜಾದಿ ಕಾ ಅಮೃತ‌ ಸರೋವರ ಯೋಜನೆಯಡಿ ಕೆರೆಗಳ ಅಭಿವೃದ್ದಿಗಾಗಿ, ಸುಮಾರು 75 ಕೆರೆಗಳನ್ನ ಆಯ್ಕೆ ಮಾಡಿಕೊಂಡು ಕಾಮಗಾರಿ ಪ್ರಾರಂಭಿಸಲಾಗಿತ್ತು. ಈ ಹಿನ್ನೆಲೆ ಇಂದು ಸಚಿವೆ ನಿರ್ಮಲಾ ಸೀತಾರಾಮನ್ ಕೆರೆ ಕಾಮಗಾರಿ ವೀಕ್ಷಣೆಗೆ ಕೋಲಾರಕ್ಕೆ ಆಗಮಿಸಿದ್ದರು.
 
ಕೆರೆ ಕಾಮಗಾರಿ ವೀಕ್ಷಿಸಿದ ನಿರ್ಮಲಾ ಸೀತಾರಾಮನ್
ಕೆರೆಯನ್ನ ವೀಕ್ಷಿಸಿದ ನಿರ್ಮಾಲಾ ಸೀತಾರಾಮನ್ ಅಧಿಕಾರಿಗಳ ವಿರುದ್ದ ಕಿಡಿಕಾರಿದರು. ಕೆರೆಗೆ ನೀರು ಸುಗಮವಾಗಿ‌ ಹರಿದು ಬರಬೇಕು. ನೀರು ಹರಿದು ಬರದಿದ್ದರೆ ಕೆರೆ ಹೇಗೆ ತುಂಬುತ್ತದೆ?. ಮುಂದಿನ ಕೆರೆಗಳಿಗೆ ಯಾವ‌ ರೀತಿ ನೀರು‌ ಹರಿದು ಹೋಗಲು ಸಾಧ್ಯ? ಎಂದು ಪ್ರಶ್ನಿಸಿದರು. ಕೆರೆಗಳ ಅಭಿವೃದ್ದಿಗೆ ಮತ್ತಷ್ಟು‌ ಹಣ ನೀಡುತ್ತೇವೆ. ಆದರೆ, ಕಾಮಗಾರಿಯನ್ನು ಸಮರ್ಪಕವಾಗಿ ಮಾಡಬೇಕು ಎಂದು ಜಿ.ಪಂ‌ ಸಿಇಒ ಮತ್ತು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
 
ಜಿಲ್ಲೆಯಲ್ಲಿ ಕೆರೆ ಕಾಮಗಾರಿಗೆ ಸಚಿವರ ಅನುದಾನದಿಂದ 1.83 ಕೋಟಿ ರೂ.ಬಿಡುಗಡೆ ಮಾಡಲಾಗಿದೆ. ಕೋಲಾರದ 75 ಕೆರೆಗಳ ಕಾಮಗಾರಿಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಅದರಂತೆ ಇಂದು ಬಂಗಾರಪೇಟೆ ತಾಲೂಕಿನ ಚಿಕ್ಕ ಅಂಕಡಹಳ್ಳಿ ಕೆರೆಯ ಅಭಿವೃದ್ದಿ ಕಾಮಗಾರಿ ವೀಕ್ಷಣೆ ಮಾಡಿದ್ದು, ನಂತರ ಕೆಜಿಎಫ್‌ನ ಪೆದ್ದಪಲ್ಲಿ ಮತ್ತು ಕೋಲಾರ ತಾಲ್ಲೂಕಿನ ಶೆಟ್ಟಿಕೊತ್ತನೂರು ಗ್ರಾಮದ ಕೆರೆಗಳ ವೀಕ್ಷಣೆ ನಡೆಯಲಿದೆ. ಸಚಿವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ, ಸಂಸದ ಎಸ್.ಮುನಿಸ್ವಾಮಿ ಮತ್ತು ಮಾಜಿ ಶಾಸಕರು ಸಾಥ್ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments