Select Your Language

Notifications

webdunia
webdunia
webdunia
webdunia

ದುರುದ್ದೇಶದಿಂದ ಪ್ರಕರಣ ದಾಖಲಿಸಲು ವಿಳಂಬವಾಗಿಲ್ಲ: ಮಂಜುಳ ಮಾನಸ

ದುರುದ್ದೇಶದಿಂದ ಪ್ರಕರಣ ದಾಖಲಿಸಲು ವಿಳಂಬವಾಗಿಲ್ಲ: ಮಂಜುಳ ಮಾನಸ
ಬೆಂಗಳೂರು , ಬುಧವಾರ, 20 ಜುಲೈ 2016 (17:21 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದುರುದ್ದೇಶದಿಂದ ಪ್ರಕರಣ ದಾಖಲಿಸಲು ವಿಳಂಬ ಮಾಡಿಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಸ್ಪಷ್ಟಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ, ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದುರುದ್ದೇಶದಿಂದ ಪ್ರಕರಣ ದಾಖಲಿಸಲು ವಿಳಂಬ ಮಾಡಿಲ್ಲ. ಗಣಪತಿ ಅವರು ಆತ್ಮಹತ್ಯೆಗೆ ಶರಣಾದ ಸಮಯದಲ್ಲಿ ನಾನು ಉತ್ತರ ಕರ್ನಾಟಕದಲ್ಲಿದ್ದೆ. ಹೀಗಾಗಿ ಪ್ರಕರಣ ದಾಖಲಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದರು.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಈಗಾಗಲೇ ನ್ಯಾಯಾಂಗ ತನಿಖೆಗೆ ನೀಡಲಾಗಿದೆ. ಈ ಸಮಯದಲ್ಲಿ ರಾಜ್ಯ ಮಹಿಳಾ ಆಯೋಗ ಮಧ್ಯ ಪ್ರವೇಶ ಮಾಡಲಾಗುತ್ತಿಲ್ಲ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಏಕಕಾಲಕ್ಕೆ 1280 ನೌಕರರ ವರ್ಗಾವಣೆಗೆ ಸರಕಾರ ಆದೇಶ