Webdunia - Bharat's app for daily news and videos

Install App

ಲಾಕ್‌ಡೌನ್, ನೈಟ್‌ ಕರ್ಫ್ಯೂನಿಂದ ಯಾವುದೇ ಪ್ರಯೋಜನ ಇಲ್ಲ: ಶಾಸಕ ರಘುಪತಿ ಭಟ್

Webdunia
ಮಂಗಳವಾರ, 4 ಜನವರಿ 2022 (17:34 IST)
ಕೋವಿಡ್‌ಗೆ ನಾವೆಲ್ಲ ಹೆದರಬೇಕಾಗಿಲ್ಲ. ಮಾರ್ಚ್ ಎಪ್ರಿಲ್‌ ವರೆಗೆ ಮಾತ್ರ ಇರುತ್ತದೆ. ಒಂದು ಮಟ್ಟಕ್ಕೆ ತಲುಪಿದ ನಂತರ ಅದರ ಸಂಖ್ಯೆ ಇಳಿಮುಖವಾಗುತ್ತದೆ. ಲಾಕ್‌ಡೌನ್‌ನಿಂದ ಒಮ್ಮೇಗೆ ಕೊರೋನ ಸಂಖ್ಯೆ ಏರಿಕೆಯಾಗುವುದನ್ನು ಕಡಿಮೆ ಮಾಡುತ್ತದೆ. ಆದರೆ ಲಾಕ್‌ಡೌನ್ ಮಾಡುವುದು ಬೇಡ ಹಾಗೂ ಆ ಬಗ್ಗೆ ನಮಗೆ ಯಾರಿಗೂ ಒಲವು ಇಲ್ಲ. ಲಾಕ್‌ಡೌನ್, ನೈಟ್ ಕರ್ಫ್ಯೂನಿಂದ ಯಾವುದೇ ಪ್ರಯೋಜನ ಕೂಡ ಇಲ್ಲ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ನಡೆದ ವಿದ್ಯಾರ್ಥಿಗಳ ಲಸಿಕಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೈಟ್ ಕರ್ಫ್ಯೂ ಈಗ ಅವಶ್ಯಕತೆ ಇಲ್ಲ. ಹೊಸ ವರ್ಷ ಆಚರಣೆಯಲ್ಲಿ ಗೊಂದಲ ಆಗಬಹುದೆಂಬ ಉದ್ದೇಶದಿಂದ ನೈಟ್ ಕರ್ಫ್ಯೂ ಜಾರಿಗೆ ತರಲಾಗಿದೆ. ನೈಟ್ ಕರ್ಫ್ಯೂನಿಂದ ಕೊರೋನ ತಡೆಯುತ್ತದೆ ಎಂಬುದನ್ನು ನಾನು ಒಪ್ಪಲ್ಲ ಎಂದು ಹೇಳಿದರು.
ನೈಟ್ ಕರ್ಫ್ಯೂ ಇದ್ದರೆ ಜನರಿಗೆ ಕೊರೋನ ಈಗಲೂ ಇದೆ ಎಂಬುದು ಅರ್ಥ ಆಗುತ್ತದೆ. ಇಲ್ಲದಿದ್ದರೆ ಕೊರೋನವೇ ಇಲ್ಲ ಎಂದು ಹೇಳಿ ಮಾಸ್ಕ್ ಹಾಕದೆ, ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ನಡೆಸುತ್ತಿರುತ್ತಾರೆ. ಜನರಿಗೆ ಎಚ್ಚರಿಕೆ ಇರಲಿ ಎಂಬ ಕಾರಣಕ್ಕೆ ತಜ್ಞರು ಇಂತಹ ಕ್ರಮಗಳ ಬಗ್ಗೆ ನಿರ್ದೇಶನ ನೀಡುತ್ತಿದ್ದಾರೆ. ನನ್ನ ಪ್ರಕಾರ ಸರಕಾರ ಮುಂದೆ ಲಾಕ್‌ ಡೌನ್ ಮಾಡಲಿಕ್ಕೆ ಇಲ್ಲ. ಕೊರೋನ ಸಂಖ್ಯೆ ತುಂಬಾ ಜಾಸ್ತಿಯಾದರೆ ಮಾಡಬಹುದು. ಆದರೆ ನನ್ನ ಅಭಿಪ್ರಾಯ ಲಾಕ್‌ ಡೌನ್ ಮಾಡುವುದು ಬೇಡ ಎಂದರು.
ಎರಡು ಡೋಸ್ ಪಡೆದ ಪ್ರಮಾಣ ಪತ್ರ ಇರುವವರು ಮಾತ್ರ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. ಇದನ್ನು ಆಮಂತ್ರಣ ಪತ್ರಿಕೆಯಲ್ಲಿಯೇ ನಮೂದಿಸಲಾಗಿದೆ. ಸರಕಾರದ ನಿರ್ದೇಶನದ ಪ್ರಕಾರವೇ ಪರ್ಯಾಯ ಮಹೋತ್ಸವವನ್ನು ನಡೆಸಲಾಗುವುದು. ಈ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸಲು ಮುಖ್ಯಮಂತ್ರಿಗಳು ಈಗಾಗಲೇ ಒಪ್ಪಿಗೆ ಕೊಟ್ಟಿದ್ದಾರೆ ಎಂದು ಅವರು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments