Publish Date: Thu, 12 Dec 2019 (10:49 IST)
Updated Date: Thu, 12 Dec 2019 (10:51 IST)
ಬೆಂಗಳೂರು : ಉಪಚುನಾವಣೆಯ ಬಳಿಕ ಬಿಜೆಪಿ ಸರ್ಕಾರದ ಸಂಪುಟ ಸಂಪುಟ ರಚನೆಯಾಗುತ್ತದೆ ಎಂದು ಕಾದು ಕುಳಿತ ಬಿಜೆಪಿ ಶಾಸಕರಿಗೆ ಬಿಗ್ ಶಾಕ್. ಸದ್ಯಕ್ಕೆ ಸಂಪುಟ ರಚನೆ ಮಾಡದಿರಲು ಸಿಎಂ ನಿರ್ಧರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಯಡಿಯೂರಪ್ಪ, ಅಮಿತ್ ಶಾ ಅವರ ಜತೆ ಚರ್ಚೆ ಬಳಿಕ ಸಂಪುಟ ವಿಸ್ತರಣೆ ಮಾಡಲು ನಿರ್ಧಾರ ಮಾಡಿದ್ದೇನೆ. ಅಮಿತ್ ಶಾ ಅವರು ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ಇನ್ನೂ 4 ದಿನಗಳ ಕಾಲ ದೆಹಲಿಗೆ ಹೋಗುವುದಿಲ್ಲ. ಅಮಿತ್ ಶಾ ಪ್ರಚಾರ ಮುಗಿಸಿ ಬಂದ ಬಳಿಕ ದೆಹಲಿಗೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.