Select Your Language

Notifications

webdunia
webdunia
webdunia
webdunia

ಸಂಪುಟ ವಿಸ್ತರಣೆ, ಪುನರ್‌ ರಚನೆ ಸದ್ಯಕ್ಕಿಲ್ಲ: ಸಿಎಂ ಸಿದ್ದರಾಮಯ್ಯ

ಸಂಪುಟ ವಿಸ್ತರಣೆ, ಪುನರ್‌ ರಚನೆ ಸದ್ಯಕ್ಕಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಮಂಗಳವಾರ, 17 ಜನವರಿ 2017 (15:42 IST)
ಸಂಪುಟ ವಿಸ್ತರಣೆ ಹಾಗೂ ಪುನರ್‌ ರಚನೆ ಸದ್ಯಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ಖಾಲಿ ಇರುವ ಎರಡು ಸ್ಥಾನಗಳನ್ನು ಭರ್ತಿ ಮಾಡುವ ಚಿಂತನೆ ಸದ್ಯಕ್ಕಿಲ್ಲ ಎಂದು ತಿಳಿಸಿದರು.
 
ರಾಸಲೀಲೆ ಪ್ರಕರಣದಲ್ಲಿ ಆರೋಪ ಹೊತ್ತು ರಾಜೀನಾಮೆ ನೀಡಿದ್ದ ಎಚ್.ವೈ.ಮೇಟಿ ಹಾಗೂ ಎಚ್.ಎಸ್.ಮಹದೇವಪ್ರಸಾದ್ ಅವರ ಅಕಾಲಿಕ ಮರಣದಿಂದ ತೆರುವಾಗಿರುವ ಎರಡು ಸ್ಥಾನಗಳನ್ನು ತುಂಬ ಬೇಕಿದೆ. 
 
ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳು ತೆರೆಮರೆಯ ಕಸರತ್ತು ನಡೆಸಿದ್ದು, ಎಚ್.ವೈ.ಮೇಟಿ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಕುರುಬ ಸಮುದಾಯಕ್ಕೆ ಹಾಗೂ ಎಚ್.ಎಸ್.ಮಹದೇವಪ್ರಸಾದ್ ಅವರ ಅಕಾಲಿಕ ಮರಣದಿಂದ ತೆರುವಾಗಿರುವ ಸ್ಥಾನಕ್ಕೆ ಲಿಂಗಾಯತ ಸಮುದಾಯದವರಿಗೆ ನೀಡಬೇಕು ಎಂಬ ಆಗ್ರಹಗಳು ಕೇಳಿ ಬಂದಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪೇಜಾವರ ಶ್ರೀಗಳು ದಲಿತರ ಪರವಾಗಿದ್ದಾರೆ, ಅವರ ಮೇಲೆ ಅಪಾರ ಗೌರವವಿದೆ: ಎಚ್‌.ಆಂಜನೇಯ