Publish Date: Tue, 07 Dec 2021 (15:45 IST)
Updated Date: Tue, 07 Dec 2021 (14:25 IST)
ಬಿಜೆಪಿ - ಜೆಡಿಎಸ್ ನಡುವೆ ಯಾವುದೇ ರೀತಿಯಲ್ಲಿಯೂ ಮೈತ್ರಿಯಿಲ್ಲ.2023 ರ ಚುನಾವಣೆಯಲ್ಲಿಯೂ ಮೈತ್ರಿಯಿಲ್ಲ, ಈಗಲೂ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ನಗರದಲ್ಲಿ ಮಾತಾನಾಡಿದ ಅವರು, 2023 ರ ಚುನಾವಣೆಯಲ್ಲಿ ಎಲ್ಲ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇವೆ.ನಾಯಕರೇ ತೀರ್ಮಾನ ಮಾಡುತ್ತಾರೆ ಎಂದರು.ಕಾಂಗ್ರೆಸ್ ನವರು ನಮ್ಮನ್ನು ಬಿಜೆಪಿಯ ಟೀಮ್ ಬಿ ಹೇಳುತ್ತಿದ್ದಾರೆ. ನಾವು ಟೀಮ್ ಬಿ ಆಗಿದ್ದರೆ, ಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಹಾಕುತ್ತಿರಲಿಲ್ಲ. ಮೊದಲು ನಮ್ಮ ಬಗ್ಗೆ ಹಗುರವಾಗಿ ಮಾತಾನಾಡುವುದನ್ನು ನಿಲ್ಲಿಸಲಿ ಎಂದರು.ನಮ್ಮ ಅಭ್ಯರ್ಥಿಯಿರುವ ಕ್ಷೇತ್ರದಲ್ಲಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳ ನಡುವೆ ನಾವು ಹೋರಾಟ ಮಾಡುತ್ತೇವೆ. ಸ್ಥಳೀಯ ಮುಖಂಡರ ಜತೆ ಸಮಾಲೋಚನೆ ಮಾಡಿದ್ದೇನೆ. ಮುಖಂಡರ ಅಭಿಪ್ರಾಯಗಳನ್ನೂ ನಾವು ಸಂಗ್ರಹಿಸಿದ್ದೇವೆ. ನಮ್ಮ ಗುರಿ 2023ರ ಸಾರ್ವತ್ರಿಕ ಚುನಾವಣೆಯಲ್ಲಿ 123 ಸೀಟುಗಳನ್ನು ಗೆಲ್ಲುವುದು ಎಂದರು.