Webdunia - Bharat's app for daily news and videos

Install App

ಬಿಜೆಪಿಯಲ್ಲಿ ಗೊಂದಲ ಇಲ್ಲ: ಕೋಟಾ ಶ್ರೀನಿವಾಸ ಪೂಜಾರಿ

Webdunia
ಭಾನುವಾರ, 25 ಜುಲೈ 2021 (20:07 IST)
ಸ್ವಾಭಾವಿಕವಾಗಿ ಬಿಜೆಪಿಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಮಂಗಳೂರಲ್ಲಿ ಮಾಧ್ಯಮದವ್ರ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಪಕ್ಷವನ್ನ ಮಾತೃ ಸಮಾನವಾಗಿ ನೋಡಿಕೊಂಡು ಪಕ್ಷದ ಹಿರಿಯರ ಸೂಚನೆ ಪ್ರಕಾರ ನಡೆದುಕೊಳ್ತೇನೆ ಅಂದಿದ್ದಾರೆ. ಇದು ದೇಶಕ್ಕೆ ಮತ್ತು ರಾಜ್ಯಕ್ಕೆ ಮಾದರಿಯಾಗಬಲ್ಲ ಕಾರ್ಯಕರ್ತನ ಮಾತು. ಕಾಲಕಾಲಕ್ಕೆ ಹೈಕಮಾಂಡ್ ನಿಂದ ಬರೋ ಸೂಚನೆ ಪಾಲಿಸೋದಾಗಿ ಹೇಳಿದ್ದಾರೆ.
ಮುಂದಿನದ್ದನ್ನ ಸಿಎಂ, ರಾಷ್ಟ್ರೀಯ ಅಧ್ಯಕ್ಷರು
ಮತ್ತು ರಾಜ್ಯಾಧ್ಯಕ್ಷರು ನಿರ್ಧಾರ ಮಾಡ್ತಾರೆ ಎಂದರು.
ಇನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೋಟಾ ಶ್ರೀನಿವಾಸ ಪೂಜಾರಿ ಹೆಸರು ಆಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಯಾರಾದ್ರೂ ಏನಾದ್ರೂ ಹೇಳಬಾರದು ಅನ್ನೋದು ಏನಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರ ಅಭಿಪ್ರಾಯಗಳನ್ನು ಗೌರವಿಸಬೇಕಿದೆ. ಸಾಮಾನ್ಯ ಕಾರ್ಯಕರ್ತನಾಗಿ ನನ್ನಂತಹವರು ಪಕ್ಷದ ಹಿರಿಯರು ಹೇಳಿದ್ದನ್ನು ಕೇಳ್ತೇವೆ. ಯಾರೂ ಏನೇ ಹೇಳಿದರೂ ಪ್ರಜಾಪ್ರಭುತ್ವದಲ್ಲಿ ಗೌರವಿಸುತ್ತೇನೆ ಎಂದರು

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments