Webdunia - Bharat's app for daily news and videos

Install App

ಕೊರೋನಾ ಭಯ ಬೇಡ.. ತಜ್ಞರ ಅಭಯಹಸ್ತ..

Webdunia
ಮಂಗಳವಾರ, 19 ಅಕ್ಟೋಬರ್ 2021 (16:05 IST)
1  ಹಾಗೂ 2ನೇ ಅಲೆಗಳಿಗಿಂತ ಮೂರನೇ ಅಲೆ ಇನ್ನೂ ಭಯಾನಕವಾಗಿರುತ್ತೆ ಎಂದು ತಜ್ಞರು ಹೇಳಿದ್ದರು. ಮುಂಜಾಗ್ರತಾ ಕ್ರಮವಾಗಿ ಸರ್ಕಾರಗಳು ವೈದ್ಯಕೀಯ ಸಿದ್ದತೆಗಳನ್ನು ಮಾಡಿಕೊಂಡಿದ್ದರು. ಯಾಕೆಂದರೆ ಕೊರೋನಾ 2ನೇ ಅಲೆ ವೇಳೆ ಬೆಡ್​, ಆಕ್ಸಿಜನ್ ಸಿಗದೇ ಸಾವಿರಾರು ಮಂದಿ ಅಸುನೀಗಿದ್ದರು. ಈ ಘಟನೆ ಮರುಕಳಿಸಬಾರದೆಂದು ಸರ್ಕಾರಗಳು ಪ್ರಯತ್ನ ಮೀರಿ ಸಿದ್ದತೆ ಮಾಡಿಕೊಂಡಿದ್ದವು. ಮಕ್ಕಳನ್ನು ಹೆಚ್ಚಾಗಿ ಭಾದಿಸುತ್ತೆ ಎಂದು ಹೇಳಲಾಗಿದ್ದ ಕೊರೋನಾ 3ನೇ ಅಲೆ ಈಗ ಸದ್ದಿಲ್ಲದಂತೆ ಮಾಯವಾಗಿದೆ. ದಿನಕ್ಕೆ ಸಾವಿರಗಟ್ಟಲೇ ಕೇಸ್​ಗಳು ದಾಖಲಾಗುತ್ತಿದ್ದ ಕರ್ನಾಟಕದಲ್ಲಿ ಈಗ ಬೆರಳೆಣಿಕೆಯಷ್ಟು ಕೊರೋನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಇದು ಶುಭ ಸೂಚನೆನ್ನು ತೋರಿಸುತ್ತಿದೆ.ಕರ್ನಾಟಕದಲ್ಲಿ ಸದ್ಯ ಕೊರೋನಾ ಮೂರನೇ ಅಲೆಯ ಭಯವಿಲ್ಲ. ನವೆಂಬರ್ ವೇಳೆಗೆ ಕೋವಿಡ್ 3ನೇ ಅಲೆ ಅಪ್ಪಳಿಸುತ್ತದೆ, ಇದು ತುಂಬಾ ಭಯಾನಕವಾಗಿರುತ್ತದೆ ಎಂದು ಹೇಳಿದ್ದ ತಜ್ಞರ ಲೆಕ್ಕಾಚಾರ ತಲೆಕೆಳಕಾಗಿದೆ. ಅದೃಷ್ಟ ಎನ್ನುವಂತೆ ಕೊರೋನಾ ಜನರಿಂದ ದೂರಾಗುತ್ತಿದೆ. ಇನ್ನು ಕೊರೋನಾ ಮೂರನೇ ಅಲೆಯ ಭಯವಿಲ್ಲ ಎಂದು ಆರೋಗ್ಯ ತಜ್ಞರು ರಾಜ್ಯದ ಜನರಿಗೆ ಅಭಯ ನೀಡಿದ್ದಾರೆ. ಈ ಹಿಂದೆ ನವೆಂಬರ್ ವೇಳೆಗೆ ಮೂರನೇ ಅಲೆ ಬರುತ್ತೆ ಎಂದು ತಜ್ಞರು ಹೇಳಿದ್ದರು. ಆದ್ರೆ ಅಕ್ಟೋಬರ್ ವೇಳೆಗೆ ಕೊರೋನಾ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗುತ್ತಿದೆ. ಜೊತೆಗೆ ಹೊಸ ರೂಪಾಂತರಿಗಳು ಸಹ ಪತ್ತೆಯಾಗುತ್ತಿಲ್ಲ. ಇದು ಜನರನ್ನು ನಿಟ್ಟುಸಿರು ಬಿಡುವಂತೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments