ವಿಳಂಬವಿಲ್ಲ, ನಿರ್ಲಕ್ಷ್ಯವಿಲ್ಲ, ಸಾಬೂಬುಗಳನ್ನು ಹೇಳಲಿಲ್ಲ

Sampriya
ಸೋಮವಾರ, 15 ಡಿಸೆಂಬರ್ 2025 (16:57 IST)
ಬೆಂಗಳೂರು: ರೈತರ ನೋವಿಗೆ ರಾಜ್ಯ ಸರ್ಕಾರ ಸಕಾಲದಲ್ಲಿ ಸ್ಪಂದಿಸಿದ್ದು, ತ್ವರಿತಗತಿಯಲ್ಲಿ ಪರಿಹಾರ ಬಿಡುಗಡೆ ಮಾಡಿದೆ. ಸಮರೋಪಾಧಿಯಲ್ಲಿ ಕ್ರಮ ಕೈಗೊಂಡು ಅತಿವೃಷ್ಠಿಯಿಂದಾಗಿ ಸಂಕಷ್ಟದಲ್ಲಿದ್ದ ಕಲಬುರಗಿ ಜಿಲ್ಲೆಯ ಅನ್ನದಾತರ ಬದುಕಿಗೆ ಆಸರೆಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ನಡೆಸಿದ ಜಂಟಿ ಸಮೀಕ್ಷೆ ವರದಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 3.24 ಲಕ್ಷ ಹೆಕ್ಟೇರ್ ಜಮೀನು ಹಾನಿಗೊಳಗಾಗಿತ್ತು.


- ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 3,32,318 ರೈತರು ಬೆಳೆಹಾನಿ ಪರಿಹಾರಕ್ಕೆ ಅರ್ಹತೆ ಪಡೆದಿದ್ದಾರೆ.

- ಎಸ್‌ಡಿಆರ್‌ಎಫ್ ನಿಯಮಗಳಡಿ ₹25,097.21 ಲಕ್ಷ ಪರಿಹಾರ ದೊರಕಿದೆ.

- ರಾಜ್ಯ ಸರ್ಕಾರದ ಹೆಚ್ಚುವರಿ ಇನ್‌ಪುಟ್ ಸಬ್ಸಿಡಿ ಘೋಷಣೆಯಡಿ ₹24,775.85 ಲಕ್ಷ ವಿತರಿಸಲಾಗಿದೆ.

- ಕಲಬುರಗಿ ಜಿಲ್ಲೆಗೆ ಈಗಾಗಲೇ ಒಟ್ಟು 49,873.03 ಲಕ್ಷ ಪರಿಹಾರ ನೀಡಲಾಗಿದೆ. 

ವಿವಿಧ ತಾಂತ್ರಿಕ ಕಾರಣಗಳಿಂದ ಸುಮಾರು 9,964 ರೈತರು ಪರಿಹಾರದ ಲಾಭ ಪಡೆಯುವಲ್ಲಿ ವಿಫಲರಾಗಿದ್ದಾರೆ. ಪರಿಹಾರ ಪಡೆಯುವಲ್ಲಿ ವಿಫಲರಾದ ರೈತರಿಗೆ ಸಮಸ್ಯೆ ಪರಿಹರಿಸಿಕೊಳ್ಳಲು ಅಗತ್ಯ ತಾಂತ್ರಿಕ ನೆರವನ್ನು ನೀಡಲು ಜಿಲ್ಲಾಡಳಿತ ಕ್ರಮ ಕೈಗೊಂಡಿದ್ದು, ವಂಚಿತ ರೈತರು ಕೂಡಲೇ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಬೇಕು ಎಂದು ವಿನಂತಿಸುತ್ತೇನೆ.
#ಕಲಬುರಗಿಕಲ್ಯಾಣ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments