Webdunia - Bharat's app for daily news and videos

Install App

ಗಣೇಶ ಹಬ್ಬಕ್ಕೆ ಡಿಜೆಗೆ ಅವಕಾಶವಿಲ್ಲ, ಈದ್ ಮಿಲಾದ್ ಗೆ ಒಪ್ಪಿಗೆ ಇದೆಯಾ

Krishnaveni K
ಮಂಗಳವಾರ, 3 ಸೆಪ್ಟಂಬರ್ 2024 (13:54 IST)
ಬೆಂಗಳೂರು: ಈ ಬಾರಿ ಗಣೇಶೋತ್ಸವ ಆಚರಣೆ ವೇಳೆ ಡಿಜೆ ಬಳಕೆಗೆ ಅವಕಾಶವಿಲ್ಲ ಎಂದು ರಾಜ್ಯ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಹಾಗಿದ್ದರೆ ಎರಡೇ ದಿನದಲ್ಲಿ ಬರುವ ಈದ್ ಮಿಲಾದ್ ಕತೆಯೇನು ಎಂಬುದಕ್ಕೂ ಈಗ ಸ್ಪಷ್ಟನೆ ಸಿಕ್ಕಿದೆ.

ಇದೇ ವಾರಂತ್ಯಕ್ಕೆ ಗಣೇಶ ಹಬ್ಬ ಬರುತ್ತಿದೆ. ಹೀಗಾಗಿ ಅಲ್ಲಲ್ಲಿ ಗಣೇಶನ ಮೂರ್ತಿ ಕೂರಿಸಿ ಜೋರಾಗಿ ಮ್ಯೂಸಿಕ್ ಹಾಕಿ ಜನ ಸಂಭ್ರಮಾಚರಿಸುವುದು ಸಹಜ. ಆದರೆ ಈ ಬಾರಿ ರಾಜ್ಯ ಸರ್ಕಾರ ಕೆಲವೊಂದು ಷರತ್ತು ವಿಧಿಸಿದೆ. ಗಲ್ಲಿ ಗಲ್ಲಿಯಲ್ಲಿ ಗಣೇಶ ಕೂರಿಸುವ ಮೊದಲು ಸ್ಥಳೀಯಾಡಳಿತದ ಒಪ್ಪಿಗೆ ಪಡೆಯಬೇಕು.

ಯಾರೂ ರಸ್ತೆ ಅಡ್ಡಗಟ್ಟಿ ಗಣೇಶನ ಮೂರ್ತಿ ಕೂರಿಸುವಂತಿಲ್ಲ. ರಾತ್ರಿ 10 ರ ನಂತರ ಗಣೇಶ ವಿಸರ್ಜನೆ ಮಾಡುವಂತಿಲ್ಲ. ಜೊತೆಗೆ ಡಿಜೆ ಸೌಂಡ್ ಹಾಕಿ ಇತರರಿಗೆ ತೊಂದರೆ ಮಾಡುವಂತಿಲ್ಲ ಎಂದು ನಿಷೇಧ ಹೇರಿದೆ. ಗಣೇಶ  ಹಬ್ಬ ಮುಗಿದ ಬಳಿಕ ಮುಸಲ್ಮಾನ ಬಾಂಧವರ ಈದ್ ಹಬ್ಬ ಬರುತ್ತಿದೆ.

ಸೆಪ್ಟೆಂಬರ್ 7 ಕ್ಕೆ ಗಣೇಶ ಹಬ್ಬವಾದರೆ ಸೆಪ್ಟೆಂಬರ್ 15-16 ಕ್ಕೆ ಈದ್ ಮಿಲಾದ್ ಹಬ್ಬವಿದೆ. ಈ ಹಬ್ಬಕ್ಕೂ ಡಿಜೆಗೆ ಅವಕಾಶವಿಲ್ಲ ಎಂದು ಸರ್ಕಾರ ಫರ್ಮಾನು ಹೊರಡಿಸಿದೆ. ಡಿಜೆ ಸಿಸ್ಟಂಗಳನ್ನು ಎರಡೂ ಹಬ್ಬಕ್ಕೆ ನಿಷೇಧಿಸಲಾಗಿದೆ. ಡಿಜೆ ಸೌಂಡ್ ಹಾಕಿದರೆ ಚಿಕ್ಕಮಕ್ಕಳಿಗೆ, ವಯಸ್ಸಾದವರಿಗೆ, ದುರ್ಬಲ ಹೃದಯದವರಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಈ ಆದೇಶ ಹೊರಡಿಸಲಾಗಿದೆ. ಎರಡೂ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು ಎಂದು ಸರ್ಕಾರ ಹೊಸ ನಿಯಮಾವಳಿಗಳನ್ನು ಜಾರಿಗೆ ತಂದಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments