Webdunia - Bharat's app for daily news and videos

Install App

ಯಾರಿಲ್ಲ..ಯಾರಿಲ್ಲ.. ಬಂಧನದಲ್ಲಿರುವ ದರ್ಶನ್ ನೋಡಲು ಕುಟುಂಬದವರು ಯಾರೂ ಬರಲಿಲ್ಲ

Krishnaveni K
ಮಂಗಳವಾರ, 18 ಜೂನ್ 2024 (10:52 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ರನ್ನು ನೋಡಲು ಕುಟುಂಬಸ್ಥರು ಇದುವರೆಗೆ ಯಾರೂ ಬಂದಿಲ್ಲ ಎನ್ನುವುದು ವಿಶೇಷ.

ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ರೇಣುಕಾಸ್ವಾಮಿ ಎಂಬಾತನನ್ನು ದರ್ಶನ್ ತಮ್ಮ ಸಂಗಡಿಗರೊಂದಿಗೆ ಸೇರಿ ಹಲ್ಲೆ ಮಾಡಿದ್ದರಿಂದ ಆತ ಸಾವನ್ನಪ್ಪಿದ್ದಾನೆ ಎಂಬುದು ಆರೋಪವಾಗಿದೆ. ಈ ಸಂಬಂಧ ದರ್ಶನ್ ಜೊತೆಗೆ ಪವಿತ್ರಾ ಗೌಡ ಹಾಗೂ ಒಟ್ಟು 19 ಆರೋಪಿಗಳನ್ನು ಬಂಧಿಸಲಾಗಿದೆ.

ಆದರೆ ಬಂಧನ ನಡೆದು ಹೆಚ್ಚು ಕಡಿಮೆ ಒಂದು ವಾರ ಕಳೆದರೂ ಇದುವರೆಗೆ ಯಾರೂ ದರ್ಶನ್ ರನ್ನು ನೋಡಲು ಬಂದಿಲ್ಲ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ದರ್ಶನ್ ಸಹೋದರ, ತಾಯಿ ಅಥವಾ ಸಹೋದರಿ ಕೂಡಾ ಅವರನ್ನು ನೋಡಲು ಪೊಲೀಸ್ ಸ್ಟೇಷನ್ ಗೆ ಬಂದಿಲ್ಲ. ಇದಕ್ಕೆ ಮೊದಲು ಕೆಲವು ವರ್ಷಗಳ ಹಿಂದೆ ದರ್ಶನ್ ಪತ್ನಿ ಮೇಲೆ ಹಲ್ಲೆ ನಡೆಸಿ ಜೈಲು ಸೇರಿದ್ದಾಗ ಅವರ ತಾಯಿ, ಸಹೋದರ ದಿನಕರ್ ಅವರನ್ನು ನೋಡಲು ಬಂದಿದ್ದರು. ಆದರೆ ಈಗ ದರ್ಶನ್ ತಮ್ಮ ತಾಯಿ, ಸಹೋದರನ ಜೊತೆಗೇ ವೈಮನಸ್ಯ ಹೊಂದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಯಾರೂ ಅವರನ್ನು ನೋಡಲೂ ಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments