ಐದು ಗುಂಟೆಗಿಂತ ಕಡಿಮೆ ಇರುವ ಕೃಷಿಭೂಮಿ ಮಾರುವಂತಿಲ್ಲ

Webdunia
ಬುಧವಾರ, 15 ಡಿಸೆಂಬರ್ 2021 (14:15 IST)
ಐದು ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಕೃಷಿ ಜಮೀನು ಮಾರಾಟ ಮಾಡುವಂತಿಲ್ಲ. ಮಾರಾಟ ಮಾಡಿದರೆ ಫೋಡಿ ಅಥವಾ 11ಇ ನಕ್ಷೆ ದೊರೆಯುವುದಿಲ್ಲ. ಈ ಬಗ್ಗೆ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಆಯುಕ್ತ ಮನಿಶ್ ಮೌದ್ಗಿಲ್ ಆದೇಶ ಹೊರಡಿಸಿದ್ದಾರೆ.ಆದರೆ ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ಮಿತಿಯನ್ನು 3 ಗುಂಟೆಗೆ ಇಳಿಕೆ ಮಾಡಲಾಗಿದೆ.
ಈ ನಾಲ್ಕು ಜಿಲ್ಲೆಗಳಲ್ಲಿ 3 ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಕೃಷಿ ಭೂಮಿ ಮಾರಾಟ ಮಾಡಲು ಅವಕಾಶವಿಲ್ಲ. ಉಳಿದ ಜಿಲ್ಲೆಗಳಲ್ಲಿ ಕನಿಷ್ಠ 5 ಗುಂಟೆಯನ್ನು ಸರ್ಕಾರ ನಿಗದಿ ಮಾಡಿದೆ. ಕೃಷಿ ಉದ್ದೇಶಕ್ಕೆ ಉಪಯೋಗಿಸುವ ಭೂಮಿಯ ಸರ್ವೆ ನಂಬರ್​ಗಳಲ್ಲಿ ಕನಿಷ್ಠ ವಿಸ್ತೀರ್ಣಕ್ಕಿಂತ ಕಡಿಮೆ ಇರುವುದು ಬೆಳಕಿಗೆ ಬಂದಿದೆ. ಇದಕ್ಕೆ ಕಾರಣ ತುಂಡು-ತುಂಡು ಭೂಮಿ ಮಾರಾಟ ಅಥವಾ ರೆವಿನ್ಯೂ ಬಡಾವಣೆ ನಿರ್ಮಾಣ ಮಾಡಿ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ.
ನಗರಾಭಿವೃದ್ಧಿ ಕಾಯ್ದೆಯಡಿ ನಿಯಮಬದ್ಧವಾಗಿ ಅನುಮೋದನೆ ಪಡೆಯದೆ ಕೃಷಿ ಭೂಮಿಗಳನ್ನು ಸೈಟು/ಕಟ್ಟಡಗಳಿಗಾಗಿ (ಕೃಷಿಯೇತರ ಉದ್ದೇಶಗಳಿಗಾಗಿ) ಪರಿವರ್ತಿಸುತ್ತಿದ್ದಾರೆ. ಕೃಷಿ ಉದ್ದೇಶಕ್ಕೆ ಬಳಸುವ ಬದಲು ಸೈಟುಗಳನ್ನಾಗಿ ಬಳಸಲಾಗುತ್ತಿದೆ. ಕಂದಾಯ ಲೇಔಟ್ ನಿರ್ವಿುಸಿ ಗುಂಟೆಗಳ ಲೆಕ್ಕದಲ್ಲಿ ಕೃಷಿ ಭೂಮಿಯನ್ನು ತುಂಡು ಭೂಮಿಯಾಗಿ ಮಾರಾಟ ಮಾಡುತ್ತಿದ್ದಾರೆ.
ಇತ್ತ ಇಂಥ ತುಂಡು ಭೂಮಿಯಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ಸಾಧ್ಯವಿಲ್ಲ. ಕಡಿಮೆ ವಿಸ್ತೀರ್ಣ ಹೊಂದಿರುವ ಸರ್ವೆ ನಂಬರ್​ಗಳನ್ನು (ಹಿಸ್ಸಾ ನಂಬರ್) ಸೃಷ್ಟಿಸುವುದು ಕಷ್ಟವಾಗಿದೆ. ಅದಕ್ಕಾಗಿ ಇದನ್ನು ತಡೆಯುವ ಉದ್ದೇಶಕ್ಕೆ 5 ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಭೂಮಿಯನ್ನು ಮಾರಾಟ ಮಾಡದಂತೆ ರಾಜ್ಯ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.
ಯಾರಿಗೆಲ್ಲ ವಿನಾಯಿತಿ?: ಹೊಸ ಆದೇಶಕ್ಕೂ ಮೊದಲು ಸರ್ವೆ ನಂಬರ್ ಅಥವಾ ಪಹಣಿಗಳಲ್ಲಿ ಕನಿಷ್ಠ ವಿಸ್ತೀರ್ಣಗಿಂತ ಕಡಿಮೆ ವಿಸ್ತೀರ್ಣ ಇದ್ದರೆ ಮುಂದುವರಿಯಲಿದೆ. ಅಂತಹ ಸರ್ವೆ ನಂಬರ್ ಮತ್ತು ಪಹಣಿಗಳು ಮಾನ್ಯವಾಗಿರುತ್ತವೆ. ಒಂದು ವೇಳೆ ಪಿತ್ರಾರ್ಜಿತವಾಗಿ/ಅನುವಂಶಿಕವಾಗಿ ಸ್ವೀಕರಿಸಿದ ಹಕ್ಕುಗಳು ನಿಗದಿತ ವಿಸ್ತೀರ್ಣಕ್ಕಿಂತ ಕಡಿಮೆ ಇದ್ದರೂ ಹೊಸ ಪಹಣಿ ಮತ್ತು ಫೋಡಿ ರಚಿಸಬಹುದು. ಜತೆಗೆ ಈಗಾಗಲೇ ಪಹಣಿಗಳಲ್ಲಿ ದಾಖಲಾದ ಮತ್ತು ಅಸ್ತಿತ್ವದಲ್ಲಿ ಇರುವ ಮಾಲೀಕರ ಹಕ್ಕುಗಳ ಪ್ರಕಾರ ಫೋಡಿಯನ್ನು ಕನಿಷ್ಠ ವಿಸ್ತೀರ್ಣಕ್ಕಿಂತ ಕಡಿಮೆ ಪ್ರಮಾಣದಲ್ಲಿ ಇದ್ದರೂ ಅನುಮತಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ಮುಂದಿನ ಸುದ್ದಿ
Show comments