Webdunia - Bharat's app for daily news and videos

Install App

ಕೊರೊನಾ ವೈರಸ್ ಭೀತಿ ಬೇಡ : ಕೋಳಿ, ಮಾಂಸ ಬಿಂದಾಸ್ ಆಗಿ ತಿನ್ನಿ ಎಂದ ಸಚಿವ

Webdunia
ಬುಧವಾರ, 4 ಮಾರ್ಚ್ 2020 (20:57 IST)
ಕೊರೊನಾ ವೈರಸ್ ಭಯವಿಲ್ಲದೇ ಕೋಳಿ, ಮಾಂಸವನ್ನು ಬಿಂದಾಸ್ ಆಗಿ ತಿನ್ನಿ. ಹೀಗಂತ ರಾಜ್ಯದ ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ.

ಇತ್ತೀಚೆಗೆ ಚೀನಾ ದೇಶದಲ್ಲಿ ಕಾಣಿಸಿಕೊಂಡಿರುವ ಕರೋನ ವೈರಸ್ ಸೋಂಕು ಕೋಳಿಗಳಿಂದ ಹರಡುತ್ತದೆ ಎಂಬ ವದಂತಿ, ತಪ್ಪು ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವದಂತಿಗೆ ಯಾವುದೇ ವೈಜ್ಞಾನಿಕ ಆಧಾರ ಇರುವುದಿಲ್ಲ. ನಮ್ಮ ದೇಶದಲ್ಲಿ ಕೋಳಿಗಳಿಗೆ ಕರೋನ ವೈರಾಣು ಸೋಂಕು ಕಾಣಿಸಿಕೊಂಡ ಬಗ್ಗೆ ಇದುವರೆಗೆ ಯಾವುದೇ ವರದಿಗಳಿಲ್ಲ .

ಈ ವೈರಾಣು ಸೋಂಕು ಹರಡುವಿಕೆಯಲ್ಲಿ ಕೋಳಿಗಳ ಪಾತ್ರವೇನೂ ಇಲ್ಲ. ಸೋಂಕು ಪೀಡಿತ ಮನುಷ್ಯರ ಸಂಪರ್ಕದಿಂದ ಮಾತ್ರ ಈ ಸೋಂಕು ಇತರರಿಗೆ ಹರಡುವುದರ ಬಗ್ಗೆ ತಜ್ಞರು ಅಭಿಪ್ರಾಯ ಪಟ್ಟಿರುತ್ತಾರೆ ಎಂದು ಪಶುಸಂಗೋಪನೆ ಹಾಗೂ ಹಜ್ ಮತ್ತು ವಕ್ಫ್ ಸಚಿವರಾದ ಪ್ರಭು ಚವ್ಹಾಣ್ ಹೇಳಿದ್ದಾರೆ.

ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಯಿಂದಾಗಿ ಕುಕ್ಕಟ ಉದ್ಯಮಕ್ಕೆ ಪೆಟ್ಟು ಬೀಳುತ್ತಿದೆ.  ಸಾಮಾನ್ಯವಾಗಿ ಕೋಳಿ ಮಾಂಸವನ್ನು 100 ಡಿಗ್ರಿ ಸೆಂಟಿಗ್ರೇಡ್ ಉಷ್ಣತೆಯಲ್ಲಿ ಬೇಯಿಸಲಾಗುತ್ತದೆ. ಈ ಉಷ್ಣತೆಯಲ್ಲಿ ಯಾವುದೇ ವೈರಾಣುಗಳು ಬದುಕುಳಿಯಲು ಸಾಧ್ಯವಿಲ್ಲ.

ಆದ್ದರಿಂದ, ಸಾರ್ವಜನಿಕರು ಕರೋನಾ ವೈರಾಣು ಸೋಂಕು ಕೋಳಿಗಳಿಂದ ಹರಡುತ್ತದೆ ಎಂಬ ವದಂತಿಗಳಿಗೆ ಕಿವಿ ಕೊಡಬಾರದು ಎಂದು ಸಚಿವರು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ ವಿಶ್ವಗುರು ಆಗಬೇಕೆನ್ನುವುದ ಪ್ರಿಯಾಂಕ್‌ ಖರ್ಗೆಗೆ ಸಹಿಸಲಿಕ್ಕಾಗದ ಸಂಗತಿಯೇ: ಸಿಟಿ ರವಿ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಯಾರು ಗೊತ್ತಾ

ಗಣೇಶ ಹಬ್ಬ 2025: ವಿಶೇಷ ದಿನದಂದು ಪರಿಸರ ಜಾಗೃತಿ ಮೂಡಿಸಿದ ಮಂತ್ರಾಲಯ ಶ್ರೀಗಳು

ದಸರಾ ಉದ್ಘಾಟನೆ ಮುನ್ನಾ ಬಾನು ಮುಪ್ತಾಕ್‌ರಿಂದ ಸ್ಪಷ್ಟನೆ ಕೇಳಿದ ಯದುವೀರ್ ಒಡೆಯರ್‌

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments