Webdunia - Bharat's app for daily news and videos

Install App

ಸುವರ್ಣಸೌಧದಲ್ಲಿ ಕಳಪೆ ಊಟ ಆರೋಪ: ಚಾಲಕರಿಗೆ ಯಾಕೆ ಈ ತಾರತಮ್ಯ?

Webdunia
ಗುರುವಾರ, 7 ಡಿಸೆಂಬರ್ 2023 (10:13 IST)
ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನಕ್ಕೆ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರಿಗೆ ಸರಿಯಾದ ಊಟ ಸಿಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಸರ್ಕಾರಿ ಕಾರು ಚಾಲಕರು, ಗುತ್ತಿಗೆ ಕೆಲಸಗಾರರಿಗೆ ಸಂಗಮೇಶ್ವರನಗರದ ತರಬೇತಿ ಸಂಕೀರ್ಣದಲ್ಲಿ ವಸತಿ ಕಲ್ಪಿಸಲಾಗಿದೆ. ಆದರೆ ಇಲ್ಲಿ ಸೂಕ್ತ ವ್ಯವಸ್ಥೆ ಇಲ್ಲ ಎಂದು ಚಾಲಕರಿಂದ ಆಕ್ರೋಶ ವ್ಯಕ್ತವಾಗಿದೆ.

ಕಳಪೆ ಊಟ ನೀಡಲಾಗುತ್ತಿದೆ. ಈ ಬಗ್ಗೆ ಪ್ರಶ್ನಿಸಿದರೆ ಪೊಲೀಸರು ಆವಾಜ್ ಹಾಕುತ್ತಿದ್ದಾರೆ ಎಂದು ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂರು ದಿನಗಳಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಸರಿಯಾಗಿ ಬೇಯದ ಚಪಾತಿ ನೀಡುತ್ತಿದ್ದಾರೆ. ಶೌಚಾಲಯ ವ್ಯವಸ್ಥೆಯೂ ಸರಿಯಾಗಿಲ್ಲ ಎಂದು ಚಾಲಕರು ಅಳಲು ತೋಡಿಕೊಂಡಿದ್ದಾರೆ.

ಇಷ್ಟೊಂದು ಖರ್ಚು ಮಾಡಿ ಅಧಿವೇಶನ ನಡೆಸುವಾಗ ಜನ ನಾಯಕರಿಗೆ ಬೇಕಾದಂತೇ ಸೌಲಭ್ಯ ನೀಡಲಾಗುತ್ತಿದೆ. ಆದರೆ ಬಡಪಾಯಿ ಚಾಲಕರಿಗೆ ಮೂಲ ಸೌಕರ್ಯ ಒದಗಿಸಲೂ ಕಷ್ಟವೇ ಎಂದು ಆಕ್ರೋಶ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

ಮುಂದಿನ ಸುದ್ದಿ
Show comments