Webdunia - Bharat's app for daily news and videos

Install App

ವೃದ್ಧಾಪ್ಯ ವೇತನವೂ ಇಲ್ಲ, ಪಡಿತರ ಅಕ್ಕಿಯೂ ಇಲ್ಲ: ಪ್ರವಾಹ ಸಂತ್ರಸ್ತೆ ಅಜ್ಜಿ ಅಳಲು

Webdunia
ಶನಿವಾರ, 31 ಜುಲೈ 2021 (18:06 IST)
ಹೌದು, ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಾಮಪೂರದ ಬಿಎಸ್‌ಎನ್‌ಎಲ್ ಕಚೇರಿ ಹತ್ತಿರವಿರುವ ೭೭ ವರ್ಷ ವಯಸ್ಸಿನ ವೃದ್ಧೆ ದುಂಡವ್ವ ಕರೋಳಿ ಎಂಬುವಳ ಯಾತನೆ ಹೇಳತೀರದು. ೨೦೦೫ ನೇ ಸಾಲಿನಲ್ಲಿ ದುಂಡವ್ವ ಕಂದಾಯ ಇಲಾಖೆ ಮಾಸಿಕ ೪೦೦ ರೂಪಾಯಿ ವೃದ್ಧಾಪ್ಯ ವೇತನ ಮಂಜೂರು ಮಾಡಿ ಆದೇಶ ನೀಡಿದೆ. ಈಲ್ಲಾ ಖಜಾನೆ ತಯಾರಿಸಿರುವ ವೃದ್ಧಾಪ್ಯ ವೇತನ ಫಲಾನುಭವಿ ಪಟ್ಟಿಯಲ್ಲಿ ಮತ್ತು ಪ್ರತಿ ತಿಂಗಳು ಖಜಾನೆಯಿಂದ ಅಂಚೆ ಕಚೇರಿಗೆ ವಕ ಸದಸ ವೇತನ ಸಂದಾಯವಾಗುತ್ತಿತ್ತು.
 ಕಳೆದೊಂದು ವರ್ಷದಿಂದ ಹಣ ಬರುತ್ತಿಲ್ಲ. ಪಡಿತರ ಅಕ್ಕಿಯಂತು ವೃದ್ಧೆಗೆ ಗಗನಕುಸುಮವಾಗಿದೆ. ಕಳೆದ ೧೦ ವರ್ಷಗಳಿಂದ ಹಲವಾರು ಸರ್ಕಾರಿ ಕಚೇರಿ ಅಲೆದು ಸುಸ್ತಾಗಿ ಕೊನೆಗೂ ಪಡಿತರ ಅಕ್ಕಿ ದೊರಕದೆ ಉಪವಾಸದಲ್ಲಿಯೇ ಬದುಕು ಸಾಗಿಸುತ್ತಿದ್ದಾಳೆ. ಸುತ್ತಲಿನ ಕುಟುಂಬಗಳು ಇವಳ ಸಮಸ್ಯೆ ಅರಿತು ದಿನಂಪ್ರತಿ ಊಟ, ಉಪಚಾರ ಮಾಡುತ್ತಿದ್ದರೆ ಒಂದೊಂದು ಹೊತ್ತು ಉಪವಾಸವೇ ಗತಿಯಾಗಿದೆ.
ಬಾಗಿದ ಶರೀರ, ಪತಿ, ಮಕ್ಕಳು ಇಲ್ಲದೆ ಒಬ್ಬಂಟಿಯಾಗಿ ಸುರೇಶ ಹಟ್ಟಿ ಎಂಬುವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಕಾಲ ಕಳೆಯುತ್ತಿರುವ ವೃದ್ಧೆ ದುಂಡವ್ವಳಿಂದ ಮನೆ ಬಾಡಿಗೆಯೆಂದು ಒಂದು ಪೈಸೆಯೂ ಹಣವನ್ನು ಸುರೇಶ ಪಡೆದಿಲ್ಲ. 
ಇವಳ ನಿತ್ಯ ಗೋಳು, ಸಮಸ್ಯೆ ಕೇಳಿ ಮನೆ ನೀಡಿದ್ದಲ್ಲದೆ ಉಪಚಾರದಲ್ಲಿಯೂ ತೊಡಗಿರುವದು ಮಾನವೀಯತೆಗೆ ಹಿಡಿದ ಕನ್ನಡಿಯಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments