Webdunia - Bharat's app for daily news and videos

Install App

ಇನ್ಮುಂದೆ ಎಲ್ಲರಿಗೂ ಸಿಗಲ್ಲ ಫ್ರೀ ವಿದ್ಯುತ್

Krishnaveni K
ಶನಿವಾರ, 23 ಮಾರ್ಚ್ 2024 (11:08 IST)
ಬೆಂಗಳೂರು: ರಾಜ್ಯ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳ ಪೈಕಿ ಉಚಿತ ವಿದ್ಯುತ್ ಸೌಲಭ್ಯ ಕೂಡಾ ಒಂದು. ಇದರಡಿ ಅನೇಕ ಕುಟುಂಬಗಳು ಇಂದು ಉಚಿತ ವಿದ್ಯುತ್ ಸೌಲಭ್ಯ ಅನುಭವಿಸುತ್ತಿದೆ.

 ಆದರೆ ಇದೀಗ ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಸಿಎಂ ಸಿದ್ದರಾಮಯ್ಯ ಫಲಾನುಭವಿಗಳಿಗೆ ಶಾಕ್ ಕೊಟ್ಟಿದ್ದಾರೆ. ಇನ್ಮುಂದೆ 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಿದವರಿಗೆ ಉಚಿತ ವಿದ್ಯುತ್ ಸೌಲಭ್ಯ ಸಿಗಲ್ಲ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರತಿ ಮನೆಗೂ 200 ಯೂನಿಟ್ ಫ್ರೀ ವಿದ್ಯುತ್ ಎಂದು ಘೋಷಿಸಿದ್ದ ಸಿದ್ದರಾಮಯ್ಯ ಸರ್ಕಾರ ಬಳಿಕ ಷರತ್ತುಗಳನ್ನು ವಿಧಿಸಿತ್ತು. ಇದೀಗ ರಾಜ್ಯ ತೀವ್ರ ಬರಗಾಲ ಎದುರಿಸುತ್ತಿದ್ದು, ವಿದ್ಯುತ್ ಉತ್ಪಾದನೆಗೆ ತೊಂದರೆಯಾಗಿದೆ.

ಹೀಗಾಗಿ 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಿದರೆ ಬಳಸಿದ ಅಷ್ಟೂ ಯೂನಿಟ್ ಗಳಿಗೆ ಶೇ.20 ರಷ್ಟು ಹೆಚ್ಚುವರಿಯಾಗಿ ಫುಲ್ ಬಿಲ್ ಪಾವತಿ ಮಾಡಬೇಕಾಗುತ್ತದೆ ಎಂದಿದ್ದಾರೆ. ಬೇಸಿಗೆಯಲ್ಲಿ ವಿದ್ಯುತ್ ಬಳಕೆ ಹೆಚ್ಚು. ಆದರೆ ಬೇಡಿಕೆಗೆ ತಕ್ಕಷ್ಟು ಉತ್ಪಾದನೆ ಸಾಧ್ಯವಾಗದೇ ಇರುವುದರಿಂದ ಇಂತಹ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments