Select Your Language

Notifications

webdunia
webdunia
webdunia
webdunia

ಎಚ್. ವಿಶ್ವನಾಥ್ ಪಕ್ಷ ಬಿಡುವ ಬಗ್ಗೆ ಮಾಹಿತಿಯಿಲ್ಲ: ಸಿಎಂ ಸಿದ್ಧರಾಮಯ್ಯ

ಎಚ್. ವಿಶ್ವನಾಥ್ ಪಕ್ಷ ಬಿಡುವ ಬಗ್ಗೆ ಮಾಹಿತಿಯಿಲ್ಲ: ಸಿಎಂ ಸಿದ್ಧರಾಮಯ್ಯ
Bangalore , ಸೋಮವಾರ, 24 ಏಪ್ರಿಲ್ 2017 (12:42 IST)
ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎಚ್. ವಿಶ್ವನಾಥ್ ಪಕ್ಷ ತೊರೆಯುತ್ತಿದ್ದಾರೆಂಬ ಊಹಾಪೋಹಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

 
ವಿಶ್ವನಾಥ್ ಪಕ್ಷ ತೊರೆಯುವ ಬಗ್ಗೆ ತನಗೆ ಯಾವುದೇ ಮಾಹಿತಿಯಿಲ್ಲ ಎಂದಿದ್ದಾರೆ. ಇತ್ತೀಚೆಗೆ ಆಗಾಗ ಸಿಎಂ ಸಿದ್ಧರಾಮಯ್ಯ ಹಾಗೂ ಆಡಳಿತದ ಬಗ್ಗೆ ಬಹಿರಂಗವಾಗಿಯೇ ಟೀಕಿಸಿ ಪಕ್ಷಕ್ಕೆ ಮುಜುಗರ ತರುತ್ತಿದ್ದ ವಿಶ್ವನಾಥ್ ಪಕ್ಷ ತೊರೆಯುತ್ತಿದ್ದಾರೆಂದು ಸುದ್ದಿ ಹಬ್ಬಿತ್ತು.

ಇದೇ ವೇಳೆ ಕೆಪಿಸಿ ಅಧ್ಯಕ್ಷರ ಆಯ್ಕೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಇದರಲ್ಲಿ ತಾವು ಮೂಗು ತೂರಿಸುವುದಿಲ್ಲ. ಹೈಕಮಾಂಡ್ ಯಾರನ್ನು ಆಯ್ಕೆ ಮಾಡುತ್ತದೋ ಅವರನ್ನು ಒಪ್ಪಿಕೊಳ್ಳುತ್ತೇವೆ ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್`ಗೆ ಹದ್ದು ಡಿಕ್ಕಿ