Webdunia - Bharat's app for daily news and videos

Install App

ಜೈ ಶ್ರೀರಾಮ್ ಅಲ್ಲ, ಓನ್ಲೀ ಅಲ್ಲಾಹು ಅಕ್ಬರ್! ಅನ್ಯ ಕೋಮಿನ ಯುವಕರಿಂದ ಹಲ್ಲೆ

Krishnaveni K
ಗುರುವಾರ, 18 ಏಪ್ರಿಲ್ 2024 (08:42 IST)
Photo Courtesy: Instagram
ಬೆಂಗಳೂರು: ರಾಮನವಮಿ ಆಚರಿಸಿಕೊಂಡು ಕಾರಿನಲ್ಲಿ ತೆರಳುತ್ತಿದ್ದವರ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿ ಅವಾಚ್ಯವಾಗಿ ನಿಂದಿಸಿದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ ಬೆಟ್ಟಳ್ಳಿ ಮಸೀದಿ ಬಳಿ ನಡೆದಿದೆ.

ರಾಹುಲ್ ಮತ್ತು ಪವನ್ ಎಂಬ ಇಬ್ಬರು ಯುವಕರು ಕಾರಿನಲ್ಲಿ ತೆರಳುತ್ತಿದ್ದವರು ಭಗವಧ‍್ವಜ ಹಿಡಿದು ಜೈಶ್ರೀರಾಮ್ ಎನ್ನುತ್ತಾ ಸಾಗುತ್ತಿದ್ದರು. ಈ ವೇಳೆ ಮಸೀದಿ ಬಳಿ ಅನ್ಯಕೋಮಿನ ಯುವಕರಿಬ್ಬರು ಕಾರು ಅಡ್ಡಗಟ್ಟಿ, ಜೈಶ್ರೀರಾಮ್ ಅನ್ನಬೇಕಾ? ಜೈಶ್ರೀರಾಮ್ ಎಲ್ಲ ಇಲ್ಲ. ಓನ್ಲೀ ಅಲ್ಲಾಹು ಅಕ್ಬರ್ ಎಂದು ನಿಂದಿಸಿದ್ದಾರೆ.

ಈ ವೇಳೆ ಕಾರಿನಲ್ಲಿದ್ದ ಯುವಕರು ನಿಮ್ಮ ಹಬ್ಬದ ವೇಳೆ ನಾವು ಹೀಗೆ ಮಾಡುತ್ತೇವಾ ಎಂದು ಪ್ರಶ್ನಿಸಿದ್ದಾರೆ. ಕಾರಿನಲ್ಲಿದ್ದ ಯುವಕರು ಈ ರೀತಿ ಪ್ರಶ್ನೆ ಮಾಡಿ ಕಾರಿನಿಂದ ಇಳಿದಿದ್ದಾರೆ. ಈ ವೇಳೆ ಅನ್ಯಕೋಮಿನ ಮತ್ತಷ್ಟು ಯುವಕರು ಜೊತೆ ಸೇರಿದ್ದು ಕಾರಿನಲ್ಲಿದ್ದವರಿಗೆ ಹಲ್ಲೆ ಮಾಡಿದ್ದಾರೆ.

ಕಾರಿನಲ್ಲಿ ಒಟ್ಟು ಮೂವರು ಯುವಕರಿದ್ದರು. ಇವರ ಮೇಲೆ ಹಲ್ಲೆಯಾಗಿದೆ. ಈ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿ ಯುವಕರಿಗಾಗಿ ಹುಡುಕಾಟ ನಡೆಸಿದ್ದಾರೆ. ಘಟನೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments