Webdunia - Bharat's app for daily news and videos

Install App

ಮದ್ಯಪ್ರಿಯರೇ, ನಾಳೆಯಿಂದ ಬೆಂಗಳೂರಿನಲ್ಲಿ ಮದ್ಯ ಸಿಗಲ್ಲ

Krishnaveni K
ಮಂಗಳವಾರ, 23 ಏಪ್ರಿಲ್ 2024 (14:24 IST)
ಬೆಂಗಳೂರು: ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಾಳೆಯಿಂದಲೇ ಮದ್ಯ ನಿಷೇಧ ಮಾಡಲಾಗಿದೆ.

ನಾಳೆಯಿಂದ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಮದ್ಯ ಸಿಗಲ್ಲ. ನಾಳೆ ಮಧ್ಯರಾತ್ರಿಯಿಂದ ಏಪ್ರಿಲ್ 26 ರ ಮಧ್ಯರಾತ್ರಿವರೆಗೆ ಬೆಂಗಳೂರಿನಲ್ಲಿ ಸೆಕ್ಷನ್ 144 ಜಾರಿ ಮಾಡಲಾಗುತ್ತದೆ. ಅದರಂತೆ ಗುಂಪುಗೂಡುವಂತಿಲ್ಲ ಮತ್ತು ಮದ್ಯದಂಗಡಿಗಳು ಬಂದ್ ಆಗಲಿವೆ.

ಯಾವುದೇ ಅಹಿತಕರ ಘಟನೆಗಳು ನಡೆಯಬಾರದೆಂದು ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ. ನಗರದಾದ್ಯಂತ ನಾಳೆಯಿಂದ ಪೊಲೀಸ್ ಸರ್ಪಗಾವಲು ಏರ್ಪಡಲಿದೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಆದೇಶ ಹೊರಡಿಸಿದ್ದಾರೆ.

ಇಂದಿಗೆ ಬೆಂಗಳೂರಿನಲ್ಲಿ ಬಹಿರಂಗ ಸಮಾವೇಶ, ಪ್ರಚಾರಕ್ಕೆ ತೆರೆ ಬೀಳಲಿದೆ. ನಾಳೆಯಿಂದ ಎರಡು ದಿನಗಳ ಕಾಲ ಬಹಿರಂಗ ಸಮಾವೇಶಗಳು, ಸಭೆಗಳಿಗಾಗಿ ಜನರು ಒಟ್ಟುಗೂಡುವಂತಿಲ್ಲ. ಏಪ್ರಿಲ್ 26 ರಂದು ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಕಡೆ ಮೊದಲ ಹಂತದ ಮತದಾನ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments