ಸದ್ಯಕ್ಕೆ ಲಾಕ್ ಡೌನ್ ಇಲ್ಲ ..!!!

Webdunia
ಮಂಗಳವಾರ, 30 ನವೆಂಬರ್ 2021 (14:37 IST)
ರಾಜ್ಯದಲ್ಲಿ ಅಥವಾ ಕೋವಿಡ್ ಸಂಬಂಧಿಸಿ ಮತ್ತೊಮ್ಮೆ ಲಾಕ್ ಡೌನ್ ಅಥವಾ ಇನ್ನು ಯಾವುದೇ ಊಹಾಪೋಹದ ಕ್ರಮಗಳ ಬಗ್ಗೆ ಚಿಂತನೆ ಸರಕಾರದ ಮುಂದೆ ಇಲ್ಲ. ಜನ ಜೀವನ ಈಗಿರುವಂತೆಯೇ ಮುಂದುವರಿಯಬೇಕು ಎಂಬುದು ನಮ್ಮ ಆಶಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಇಂದು ಸಭೆಯನ್ನು ನಡೆಸುತ್ತಿದ್ದಾರೆ. ಸಭೆಯಲ್ಲಿ ಕೂಲಂಕಷವಾಗಿ ಎಲ್ಲ ಚರ್ಚೆ ನಡೆಯಲಿದೆ. ಸಭೆಯಲ್ಲಿ ಚರ್ಚಿಸಿದ ವಿಚಾರಗಳ ಬಗ್ಗೆ ನನ್ನೊಂದಿಗೆ ಹಂಚಿಕೊಳ್ಳುತ್ತಾರೆ. ರಾಜ್ಯದಲ್ಲಿರುವ ಸ್ಥಿತಿಯನ್ನು ಗಮನಿಸಿ ಮುಂದಿನ ಕ್ರಮದ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದರು.
 
ಒಂದು ಕಡೆ ಹೊಸ ತಳಿ ಒಮಿಕ್ರಾನ್ ಬಗ್ಗೆ ಅಂತಾರಾಷ್ಟ್ರೀಯ, ರಾಷ್ಟ್ರ ಮಟ್ಟದಲ್ಲಿ ಹಾಗೂ ರಾಜ್ಯದಲ್ಲಿ ಏನು ಪರಿಣಾಮ ಆಗುತ್ತದೆ ಎಂಬುದನ್ನು ಗಮನಿಸುತ್ತಿದ್ದೇವೆ. ಇನ್ನೊಂದೆಡೆ ಈಗಿರುವ ಡೆಲ್ಟಾ ರೂಪಾಂತರಿಯಲ್ಲಿ ಅಲ್ಲಲ್ಲಿ ಕ್ಲಸ್ಟರ್ ಆಗುತ್ತಿರುವುದನ್ನು ರಾಜ್ಯ ಸರಕಾರ ನಿಭಾಯಿಸಬೇಕಾಗಿದೆ. ಎರಡು ಹಂತದಲ್ಲಿ ನಿಭಾಯಿಸುವ ಕೆಲಸ ಸರಕಾರ ಮಾಡಬೇಕಾಗಿದೆ.
 
ನಾವು ವೈಜ್ಞಾನಿಕವಾಗಿ ಹೊಸ ರೂಪಾಂತರಿಯ ಬಗ್ಗೆ ರಾಜ್ಯ ಸರಕಾರ ನಿಗಾ ವಹಿಸುತ್ತಿದೆ. ಎನ್ಸಿಬಿಎಸ್ ಗೆ ಮಾದರಿಯನ್ನು ಹೆಚ್ಚಿನ ಪರೀಕ್ಷೆಗಾಗಿ ಕಳುಹಿಸಿದೆ. ವಿದೇಶದಿಂದ ಬಂದಿರುವ ಪ್ರಯಾಣಿಕರ ಬಗ್ಗೆ ವಿಶೇಷ ನಿಗಾ ಇಡುತ್ತಿದ್ದೇವೆ. ಪ್ರಯಾಣಿಕರ ಟ್ರ್ಯಾಕಿಂಗ್, ಟ್ರೇಸಿಂಗ್ ಹಾಗೂ ಅವರ ಸಂಪರ್ಕಕ್ಕೆ ಬಂದಿರುವವರನ್ನು ಕೂಡ ಟ್ರ್ಯಾಕಿಂಗ್, ಟ್ರೇಸಿಂಗ್ ಮಾಡಲಾಗುತ್ತದೆ. ಕ್ಲಸ್ಟರ್ ಗಳಿಗೂ ವಿಶೇಷ ಮಾರ್ಗಸೂಚಿಗಳನ್ನು ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಮತಾ ಬ್ಯಾನರ್ಜಿ ಹೆಣ್ಣು ಹುಲಿ, ಶರಣಾಗಲ್ಲ: ಮೆಹಬೂಬಾ ಮುಫ್ತಿ

ಆತ್ಮಹತ್ಯೆಗೆ ಶರಣಾದ ಡೆಂಟಲ್ ವಿದ್ಯಾರ್ಥಿನಿ, ಇದೇ ಕಾರಣಕ್ಕೆ ಪ್ರಾಣ ಕಳೆದುಕೊಂಡ್ಳ ಯುವತಿ

ಈ ವಿಚಾರಕ್ಕೆ ಪ್ರಹ್ಲಾದ್ ಜೋಶಿ ಮೊದಲು ಪ್ರತಿಕ್ರಿಯಿಸಲಿ: ದಿನೇಶ್ ಗುಂಡೂರಾವ್‌

ಪುಣೆ ಮಹಾನಗರ ಪಾಲಿಕೆ ಚುನಾವಣೆ: ಭರ್ಜರಿ ಪ್ರಚಾರ ನಡೆಸಿದ ಡಿಸಿಎಂ ಏಕನಾಥ್ ಶಿಂಧೆ

ಶಬರಿಮಲೆ ಚಿನ್ನ ಕಳವು ಪ್ರಕರಣ, ವಿಚಾರಣೆಗೆ ಹಾಜರಾದ ಮಾಜಿ ತಂತ್ರಿ ವಶಕ್ಕೆ

ಮುಂದಿನ ಸುದ್ದಿ
Show comments