Webdunia - Bharat's app for daily news and videos

Install App

ಸದ್ಯಕ್ಕೆ ಲಾಕ್ ಡೌನ್ ಇಲ್ಲ ..!!!

Webdunia
ಮಂಗಳವಾರ, 30 ನವೆಂಬರ್ 2021 (14:37 IST)
ರಾಜ್ಯದಲ್ಲಿ ಅಥವಾ ಕೋವಿಡ್ ಸಂಬಂಧಿಸಿ ಮತ್ತೊಮ್ಮೆ ಲಾಕ್ ಡೌನ್ ಅಥವಾ ಇನ್ನು ಯಾವುದೇ ಊಹಾಪೋಹದ ಕ್ರಮಗಳ ಬಗ್ಗೆ ಚಿಂತನೆ ಸರಕಾರದ ಮುಂದೆ ಇಲ್ಲ. ಜನ ಜೀವನ ಈಗಿರುವಂತೆಯೇ ಮುಂದುವರಿಯಬೇಕು ಎಂಬುದು ನಮ್ಮ ಆಶಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಇಂದು ಸಭೆಯನ್ನು ನಡೆಸುತ್ತಿದ್ದಾರೆ. ಸಭೆಯಲ್ಲಿ ಕೂಲಂಕಷವಾಗಿ ಎಲ್ಲ ಚರ್ಚೆ ನಡೆಯಲಿದೆ. ಸಭೆಯಲ್ಲಿ ಚರ್ಚಿಸಿದ ವಿಚಾರಗಳ ಬಗ್ಗೆ ನನ್ನೊಂದಿಗೆ ಹಂಚಿಕೊಳ್ಳುತ್ತಾರೆ. ರಾಜ್ಯದಲ್ಲಿರುವ ಸ್ಥಿತಿಯನ್ನು ಗಮನಿಸಿ ಮುಂದಿನ ಕ್ರಮದ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದರು.
 
ಒಂದು ಕಡೆ ಹೊಸ ತಳಿ ಒಮಿಕ್ರಾನ್ ಬಗ್ಗೆ ಅಂತಾರಾಷ್ಟ್ರೀಯ, ರಾಷ್ಟ್ರ ಮಟ್ಟದಲ್ಲಿ ಹಾಗೂ ರಾಜ್ಯದಲ್ಲಿ ಏನು ಪರಿಣಾಮ ಆಗುತ್ತದೆ ಎಂಬುದನ್ನು ಗಮನಿಸುತ್ತಿದ್ದೇವೆ. ಇನ್ನೊಂದೆಡೆ ಈಗಿರುವ ಡೆಲ್ಟಾ ರೂಪಾಂತರಿಯಲ್ಲಿ ಅಲ್ಲಲ್ಲಿ ಕ್ಲಸ್ಟರ್ ಆಗುತ್ತಿರುವುದನ್ನು ರಾಜ್ಯ ಸರಕಾರ ನಿಭಾಯಿಸಬೇಕಾಗಿದೆ. ಎರಡು ಹಂತದಲ್ಲಿ ನಿಭಾಯಿಸುವ ಕೆಲಸ ಸರಕಾರ ಮಾಡಬೇಕಾಗಿದೆ.
 
ನಾವು ವೈಜ್ಞಾನಿಕವಾಗಿ ಹೊಸ ರೂಪಾಂತರಿಯ ಬಗ್ಗೆ ರಾಜ್ಯ ಸರಕಾರ ನಿಗಾ ವಹಿಸುತ್ತಿದೆ. ಎನ್ಸಿಬಿಎಸ್ ಗೆ ಮಾದರಿಯನ್ನು ಹೆಚ್ಚಿನ ಪರೀಕ್ಷೆಗಾಗಿ ಕಳುಹಿಸಿದೆ. ವಿದೇಶದಿಂದ ಬಂದಿರುವ ಪ್ರಯಾಣಿಕರ ಬಗ್ಗೆ ವಿಶೇಷ ನಿಗಾ ಇಡುತ್ತಿದ್ದೇವೆ. ಪ್ರಯಾಣಿಕರ ಟ್ರ್ಯಾಕಿಂಗ್, ಟ್ರೇಸಿಂಗ್ ಹಾಗೂ ಅವರ ಸಂಪರ್ಕಕ್ಕೆ ಬಂದಿರುವವರನ್ನು ಕೂಡ ಟ್ರ್ಯಾಕಿಂಗ್, ಟ್ರೇಸಿಂಗ್ ಮಾಡಲಾಗುತ್ತದೆ. ಕ್ಲಸ್ಟರ್ ಗಳಿಗೂ ವಿಶೇಷ ಮಾರ್ಗಸೂಚಿಗಳನ್ನು ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments